“ಸಸ್ಯಸಂಪತ್ತು ಬೆಳೆಸಿ ಸದೃಢ ಆರೋಗ್ಯ ವೃದ್ಧಿಸಿ” ಮರ-ಗಿಡಗಳನ್ನು ಬೆಳೆಸಿ ಪೋಷಿಸುವ ಕಾರ್ಯಕ್ಕೆ ಮುಂದಾಗಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡುತ್ತಾ ಕಾಡು ಬೆಳೆದರೆ ನಾಡು ಉಳಿದಂತೆ ಎಂಬ ನಾಣ್ಣುಡಿಯಂತೆ ಮನುಷ್ಯನಿಗೆ ಅತ್ಯಂತ ಅವಶ್ಯಕವಾಗಿರುವ ಆಮ್ಲಜನಕವನ್ನು ಬಿಡುಗಡೆ ಮಾಡುವ ಗಿಡ-ಮರಗಳನ್ನು ಬೆಳಸಿ ಪೋಷಿಸಬೇಕು ಆದರೆ ಇತ್ತೀಚಿನ ದಿನಗಳಲ್ಲಿ ನಾವು ಶುದ್ಧ ಗಾಳಿಗಾಗಿ ಹಣ ಕೊಡುವ ದುಸ್ಥಿತಿ ನಿರ್ಮಾಣವಾಗಿದೆ. ಗಿಡ ಮರಗಳಿದ್ದಲ್ಲಿ ಉತ್ತಮ ಮಳೆ ಬೆಳೆಯಾಗುತ್ತದೆ. ಮನುಷ್ಯ ಆಧುನಿಕತೆಯ ಮೊರೆ ಹೋಗಿ ಗಿಡ ಮರಗಳನ್ನು ಕಡಿದು ನಾಶ ಮಾಡಿ ಪ್ರಕೃತಿಯ ಮುನಿಸಿಗೆ ಕಾರಣನಾಗಿದ್ದಾನೆ. ಈ ಕಾರಣದಿಂದಾಗಿಯೇ ಹೊಸ ಹೊಸ ಕಾಯಿಲೆಗಳು ವಕ್ಕರಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಈ ಕರೋನ ಮಹಾಮಾರಿಗೆ ಅದೆಷ್ಟೋ ಜನ ಆಮ್ಲಜನಕ ಸಿಗದೇ ಪ್ರಾಣ ತೆತ್ತಿದ್ದಾರೆ ಇನ್ನು ಮುಂದೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಗಂಡಾಂತರ ಖಚಿತ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ವರ್ಷ ರಾಜ್ಯಾದಾದ್ಯಂತ ಪರಿಸರ ಉಳಿಸಿ ಬೆಳೆಸುವ ಬಗ್ಗೆ ಜಾಗೃತಿ ಹಾಗೂ ಸಸಿ ನೆಟ್ಟು ಅದನ್ನು ಘೋಷಣೆ ಮಾಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿ ಸುಮಾರು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್. ಮೇಲ್ವಿಚಾರಕರಾದ ಆಶಾ. ಊರಿನ ಗಣ್ಯರಾದ ವೆಂಕಟೇಶ್. ಶಾಲಾ ಶಿಕ್ಷಕರಾದ ಚೌಡರೆಡ್ಡಿ. ಶ್ರೀನಿವಾಸ್. ಸೇವಾಪ್ರತಿನಿಧಿ ಭಾಗ್ಯಲಕ್ಷ್ಮಿ ಡೈರಿ ಕಾರ್ಯದರ್ಶಿ ರವಿ. ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು ಬಳಂಜದ ಸುವರ್ಣ ನಿಲಯದಲ್ಲಿ ಜರುಗಿತು. ಸಂಜೆ…

    Spread the love

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಸುಳ್ಯ: ಸುಳ್ಯ ತಾಲೂಕು ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಕ್ಷಣೆ ಬಳಿಕ ಕಾಡಾನೆ ಜನವಸತಿ ಪ್ರದೇಶದತ್ತ ದೌಡಾಯಿಸಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ನಿನ್ನೆ ರಾತ್ರಿ ಕಲ್ಚೆರ್ಪೆಯ ಪ್ರಜ್ವಲ್ ಎಂಬವರ ಬಾವಿಗೆ…

    Spread the love

    You Missed

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 24 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 20 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 42 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 85 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 121 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 43 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ