“ಸಸ್ಯಸಂಪತ್ತು ಬೆಳೆಸಿ ಸದೃಢ ಆರೋಗ್ಯ ವೃದ್ಧಿಸಿ” ಮರ-ಗಿಡಗಳನ್ನು ಬೆಳೆಸಿ ಪೋಷಿಸುವ ಕಾರ್ಯಕ್ಕೆ ಮುಂದಾಗಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡುತ್ತಾ ಕಾಡು ಬೆಳೆದರೆ ನಾಡು ಉಳಿದಂತೆ ಎಂಬ ನಾಣ್ಣುಡಿಯಂತೆ ಮನುಷ್ಯನಿಗೆ ಅತ್ಯಂತ ಅವಶ್ಯಕವಾಗಿರುವ ಆಮ್ಲಜನಕವನ್ನು ಬಿಡುಗಡೆ ಮಾಡುವ ಗಿಡ-ಮರಗಳನ್ನು ಬೆಳಸಿ ಪೋಷಿಸಬೇಕು ಆದರೆ ಇತ್ತೀಚಿನ ದಿನಗಳಲ್ಲಿ ನಾವು ಶುದ್ಧ ಗಾಳಿಗಾಗಿ ಹಣ ಕೊಡುವ ದುಸ್ಥಿತಿ ನಿರ್ಮಾಣವಾಗಿದೆ. ಗಿಡ ಮರಗಳಿದ್ದಲ್ಲಿ ಉತ್ತಮ ಮಳೆ ಬೆಳೆಯಾಗುತ್ತದೆ. ಮನುಷ್ಯ ಆಧುನಿಕತೆಯ ಮೊರೆ ಹೋಗಿ ಗಿಡ ಮರಗಳನ್ನು ಕಡಿದು ನಾಶ ಮಾಡಿ ಪ್ರಕೃತಿಯ ಮುನಿಸಿಗೆ ಕಾರಣನಾಗಿದ್ದಾನೆ. ಈ ಕಾರಣದಿಂದಾಗಿಯೇ ಹೊಸ ಹೊಸ ಕಾಯಿಲೆಗಳು ವಕ್ಕರಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಈ ಕರೋನ ಮಹಾಮಾರಿಗೆ ಅದೆಷ್ಟೋ ಜನ ಆಮ್ಲಜನಕ ಸಿಗದೇ ಪ್ರಾಣ ತೆತ್ತಿದ್ದಾರೆ ಇನ್ನು ಮುಂದೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಗಂಡಾಂತರ ಖಚಿತ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ವರ್ಷ ರಾಜ್ಯಾದಾದ್ಯಂತ ಪರಿಸರ ಉಳಿಸಿ ಬೆಳೆಸುವ ಬಗ್ಗೆ ಜಾಗೃತಿ ಹಾಗೂ ಸಸಿ ನೆಟ್ಟು ಅದನ್ನು ಘೋಷಣೆ ಮಾಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿ ಸುಮಾರು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್. ಮೇಲ್ವಿಚಾರಕರಾದ ಆಶಾ. ಊರಿನ ಗಣ್ಯರಾದ ವೆಂಕಟೇಶ್. ಶಾಲಾ ಶಿಕ್ಷಕರಾದ ಚೌಡರೆಡ್ಡಿ. ಶ್ರೀನಿವಾಸ್. ಸೇವಾಪ್ರತಿನಿಧಿ ಭಾಗ್ಯಲಕ್ಷ್ಮಿ ಡೈರಿ ಕಾರ್ಯದರ್ಶಿ ರವಿ. ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ