“ಸಸ್ಯಸಂಪತ್ತು ಬೆಳೆಸಿ ಸದೃಢ ಆರೋಗ್ಯ ವೃದ್ಧಿಸಿ” ಮರ-ಗಿಡಗಳನ್ನು ಬೆಳೆಸಿ ಪೋಷಿಸುವ ಕಾರ್ಯಕ್ಕೆ ಮುಂದಾಗಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡುತ್ತಾ ಕಾಡು ಬೆಳೆದರೆ ನಾಡು ಉಳಿದಂತೆ ಎಂಬ ನಾಣ್ಣುಡಿಯಂತೆ ಮನುಷ್ಯನಿಗೆ ಅತ್ಯಂತ ಅವಶ್ಯಕವಾಗಿರುವ ಆಮ್ಲಜನಕವನ್ನು ಬಿಡುಗಡೆ ಮಾಡುವ ಗಿಡ-ಮರಗಳನ್ನು ಬೆಳಸಿ ಪೋಷಿಸಬೇಕು ಆದರೆ ಇತ್ತೀಚಿನ ದಿನಗಳಲ್ಲಿ ನಾವು ಶುದ್ಧ ಗಾಳಿಗಾಗಿ ಹಣ ಕೊಡುವ ದುಸ್ಥಿತಿ ನಿರ್ಮಾಣವಾಗಿದೆ. ಗಿಡ ಮರಗಳಿದ್ದಲ್ಲಿ ಉತ್ತಮ ಮಳೆ ಬೆಳೆಯಾಗುತ್ತದೆ. ಮನುಷ್ಯ ಆಧುನಿಕತೆಯ ಮೊರೆ ಹೋಗಿ ಗಿಡ ಮರಗಳನ್ನು ಕಡಿದು ನಾಶ ಮಾಡಿ ಪ್ರಕೃತಿಯ ಮುನಿಸಿಗೆ ಕಾರಣನಾಗಿದ್ದಾನೆ. ಈ ಕಾರಣದಿಂದಾಗಿಯೇ ಹೊಸ ಹೊಸ ಕಾಯಿಲೆಗಳು ವಕ್ಕರಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಈ ಕರೋನ ಮಹಾಮಾರಿಗೆ ಅದೆಷ್ಟೋ ಜನ ಆಮ್ಲಜನಕ ಸಿಗದೇ ಪ್ರಾಣ ತೆತ್ತಿದ್ದಾರೆ ಇನ್ನು ಮುಂದೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಗಂಡಾಂತರ ಖಚಿತ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ವರ್ಷ ರಾಜ್ಯಾದಾದ್ಯಂತ ಪರಿಸರ ಉಳಿಸಿ ಬೆಳೆಸುವ ಬಗ್ಗೆ ಜಾಗೃತಿ ಹಾಗೂ ಸಸಿ ನೆಟ್ಟು ಅದನ್ನು ಘೋಷಣೆ ಮಾಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿ ಸುಮಾರು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್. ಮೇಲ್ವಿಚಾರಕರಾದ ಆಶಾ. ಊರಿನ ಗಣ್ಯರಾದ ವೆಂಕಟೇಶ್. ಶಾಲಾ ಶಿಕ್ಷಕರಾದ ಚೌಡರೆಡ್ಡಿ. ಶ್ರೀನಿವಾಸ್. ಸೇವಾಪ್ರತಿನಿಧಿ ಭಾಗ್ಯಲಕ್ಷ್ಮಿ ಡೈರಿ ಕಾರ್ಯದರ್ಶಿ ರವಿ. ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ