“ಸಸ್ಯಸಂಪತ್ತು ಬೆಳೆಸಿ ಸದೃಢ ಆರೋಗ್ಯ ವೃದ್ಧಿಸಿ” ಮರ-ಗಿಡಗಳನ್ನು ಬೆಳೆಸಿ ಪೋಷಿಸುವ ಕಾರ್ಯಕ್ಕೆ ಮುಂದಾಗಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡುತ್ತಾ ಕಾಡು ಬೆಳೆದರೆ ನಾಡು ಉಳಿದಂತೆ ಎಂಬ ನಾಣ್ಣುಡಿಯಂತೆ ಮನುಷ್ಯನಿಗೆ ಅತ್ಯಂತ ಅವಶ್ಯಕವಾಗಿರುವ ಆಮ್ಲಜನಕವನ್ನು ಬಿಡುಗಡೆ ಮಾಡುವ ಗಿಡ-ಮರಗಳನ್ನು ಬೆಳಸಿ ಪೋಷಿಸಬೇಕು ಆದರೆ ಇತ್ತೀಚಿನ ದಿನಗಳಲ್ಲಿ ನಾವು ಶುದ್ಧ ಗಾಳಿಗಾಗಿ ಹಣ ಕೊಡುವ ದುಸ್ಥಿತಿ ನಿರ್ಮಾಣವಾಗಿದೆ. ಗಿಡ ಮರಗಳಿದ್ದಲ್ಲಿ ಉತ್ತಮ ಮಳೆ ಬೆಳೆಯಾಗುತ್ತದೆ. ಮನುಷ್ಯ ಆಧುನಿಕತೆಯ ಮೊರೆ ಹೋಗಿ ಗಿಡ ಮರಗಳನ್ನು ಕಡಿದು ನಾಶ ಮಾಡಿ ಪ್ರಕೃತಿಯ ಮುನಿಸಿಗೆ ಕಾರಣನಾಗಿದ್ದಾನೆ. ಈ ಕಾರಣದಿಂದಾಗಿಯೇ ಹೊಸ ಹೊಸ ಕಾಯಿಲೆಗಳು ವಕ್ಕರಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಈ ಕರೋನ ಮಹಾಮಾರಿಗೆ ಅದೆಷ್ಟೋ ಜನ ಆಮ್ಲಜನಕ ಸಿಗದೇ ಪ್ರಾಣ ತೆತ್ತಿದ್ದಾರೆ ಇನ್ನು ಮುಂದೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಗಂಡಾಂತರ ಖಚಿತ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ವರ್ಷ ರಾಜ್ಯಾದಾದ್ಯಂತ ಪರಿಸರ ಉಳಿಸಿ ಬೆಳೆಸುವ ಬಗ್ಗೆ ಜಾಗೃತಿ ಹಾಗೂ ಸಸಿ ನೆಟ್ಟು ಅದನ್ನು ಘೋಷಣೆ ಮಾಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿ ಸುಮಾರು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್. ಮೇಲ್ವಿಚಾರಕರಾದ ಆಶಾ. ಊರಿನ ಗಣ್ಯರಾದ ವೆಂಕಟೇಶ್. ಶಾಲಾ ಶಿಕ್ಷಕರಾದ ಚೌಡರೆಡ್ಡಿ. ಶ್ರೀನಿವಾಸ್. ಸೇವಾಪ್ರತಿನಿಧಿ ಭಾಗ್ಯಲಕ್ಷ್ಮಿ ಡೈರಿ ಕಾರ್ಯದರ್ಶಿ ರವಿ. ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಎರಡು ವರ್ಷಗಳಿಂದ ಸಂಕಷ್ಟದಲ್ಲೇ ಪ್ರಯಾಣಿಕರು – ರೈತರು, ವಿದ್ಯಾರ್ಥಿಗಳು, ಕೂಲಿಕಾರ್ಮಿಕರ ಗೋಳಿಗೆ ಸ್ಪಂದಿಸುವವರು ಯಾರು? ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆ ಜೂನ್ 9ರಂದು ಸುರಿದ ಭಾರಿ ಮಳೆಯ…

    Spread the love

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    ಜೀವ ಬಲಿಯಾದ ಬಳಿಕವೇ ಕ್ರಮವೇ? ಹೆದ್ದಾರಿಯಲ್ಲಿ ಮರ ಧರಾಶಾಹಿ – ಅಪಾಯಕಾರಿ ಮರಗಳ ತೆರವಿಗೆ ಸಾರ್ವಜನಿಕರ ಆಗ್ರಹ ಬೆಳ್ತಂಗಡಿ, ಜೂನ್ 9: ನಿರ್ಮಾಣ ಹಂತದಲ್ಲಿರುವ ಚಾರ್ಮಾಡಿ–ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಆದರೆ ಹೆದ್ದಾರಿಯ…

    Spread the love

    You Missed

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 84 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 37 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 190 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 246 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 107 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 91 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”