ತುಳುನಾಡಿನ ದೈವಾರಾಧನೆ, ನೇಮ ಮುಂತಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ!

ಮಂಗಳೂರು: ತುಳುನಾಡಿನ ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ಜನರ ಮಿತಿಯಲ್ಲಿ ತುಳುನಾಡಿನಲ್ಲಿ ಧಾರ್ಮಿಕ ಕಾರ್ಯ ನಡೆಸಲು ಅನುಮತಿ ನೀಡಿ ಮುಖ್ಯಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ಈ ಆದೇಶ ಇನ್ನಷ್ಟೇ ಜಾರಿಗೆ ಬರಬೇಕಿದೆ.

ಕೋವಿಡ್‌-೧೯ ನಿಂದಾಗಿ ದೇಶದಾದ್ಯಂತ ಆದ ಲಾಕ್‌ಡೌನ್‌ನಿಂದಾಗಿ ಜನರ ಸಾಮಾಜಿಕ, ಧಾರ್ಮಿಕ ಆಚರಣೆಗೂ ಧಕ್ಕೆ ಉಂಟಾಗಿರುತ್ತದೆ. ಹಾಗೆಯೇ ಉಡುಪಿ ಜಿಲ್ಲೆಯ ತುಳುನಾಡಿನ ಸಂಸ್ಕೃತಿಯಂತೆ ವರ್ಷಂಪ್ರತಿ ದೈವ ನೇಮೋತ್ಸವ, ಮಾರಿಪೂಜೆ, ನಾಗಾರಾಧನೆ ಮುಂತಾದ ಧಾರ್ಮಿಕ ಸೇವಾ ಕೈಂಕರ್ಯಗಳು ನಡೆಯುತ್ತಲಿರುವುದು ಸರ್ವವಿಧಿತ. ಆದರೆ ಈ ಬಾರಿ ಲಾಕ್ ಡೌನ್ ನಿಂದಾಗಿ ಧಾರ್ಮಿಕ ಸೇವೆಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ನಿಷೇಧವಿದ್ದುದರಿಂದ ಧಾರ್ಮಿಕ ಭಾವನೆಗೆ ಘಾಸಿ ಉಂಟಾಗಿದ್ದಲ್ಲದೇ ದೈವ ಪರಿಚಾರಕರಾದ ನಾಗಸ್ವರ ವಾದಕರು, ಮಡಿವಾಳ, ದರ್ಶನಪಾತ್ರಿ, ಮದ್ಯಸ್ಥರು, ಗರೋಡಿ ವರ್ಗದವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿದಂತೆ ಹಲವಾರು ವರ್ಗದವರ ಆರ್ಥಿಕ ಸ್ಥಿತಿ ಹದಗೆಟ್ಟಿದೆ.

ಆದುದರಿಂದ ತುಳುನಾಡಿನ ದೈವರಾಧನೆ, ಮುಂತಾದ ಧಾರ್ಮಿಕ ಕೈಂಕರ್ಯ ನಡೆಸಲು ೧೦೦ ಜನ ಮೀರದಂತೆ ನಡೆಸಲು ಅವಕಾಶ ನೀಡಬೇಕೆಂದು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ರಘುಪತಿ ಭಟ್‌ ಮನವಿ ಸಲ್ಲಿಸಿದ್ದರು. ಅಲ್ಲದೇ ದೈವ ಪರಿಚಾಕರಿಗೆ ಆರ್ಥಿಕ ಪರಿಸ್ಥಿತಿ ಸುಧಾರಿಸಲು ತಲಾ ೧೦ ಸಾವಿರ ಅನುದಾನ ಮಂಜೂರು ಮಾದುವಂತೆಯೂ ಮನವಿಯಲ್ಲಿ ಕೋರಿದ್ದರು.

Spread the love
  • Related Posts

    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    ಬೆಳ್ತಂಗಡಿ: ಸರಕಾರಿ ಬಸ್ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿದ್ದು ನಿರ್ವಹಣೆಯ ಬಗ್ಗೆ ಪ್ರಶ್ನಿಸುವವರ್ಯಾರು ಎಂಬ ಪ್ರಶ್ನೆ ಮೂಡುತ್ತದೆ ಈ ಬೆನ್ನಲ್ಲೇ ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಹಠಾತ್ತನೆ ತೆರೆದುಕೊಂಡ ಪರಿಣಾಮ, ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡಿರುವ ಆತಂಕಕಾರಿ…

    Spread the love

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆ–ಚಾರ್ಮಾಡಿ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿದ್ದರೂ, ಈಗಾಗಲೇ ವಿವಿಧ ಸ್ಥಳಗಳಲ್ಲಿ ವೇಗ ಮಿತಿ ಸೂಚಿಸುವ ಫಲಕಗಳನ್ನು ಅಳವಡಿಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ವಿಶೇಷವಾಗಿ ಚಾರ್ಮಾಡಿ–ಉಜಿರೆ ಮಾರ್ಗದ ಕೆಲವು ಅಂಕುಡೊಂಕಾದ ಹಾಗೂ ಅಪಾಯಕಾರಿ ತಿರುವುಗಳಿರುವ ಪ್ರದೇಶಗಳಲ್ಲಿ ಕೂಡ 100…

    Spread the love

    You Missed

    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    • By admin
    • March 31, 2026
    • 224 views
    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    • By admin
    • March 31, 2026
    • 147 views
    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    • By admin
    • March 30, 2026
    • 111 views
    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    • By admin
    • March 29, 2026
    • 286 views
    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    • By admin
    • March 28, 2026
    • 122 views
    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 85 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್