ತುಳುನಾಡಿನ ದೈವಾರಾಧನೆ, ನೇಮ ಮುಂತಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ!

ಮಂಗಳೂರು: ತುಳುನಾಡಿನ ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ಜನರ ಮಿತಿಯಲ್ಲಿ ತುಳುನಾಡಿನಲ್ಲಿ ಧಾರ್ಮಿಕ ಕಾರ್ಯ ನಡೆಸಲು ಅನುಮತಿ ನೀಡಿ ಮುಖ್ಯಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ಈ ಆದೇಶ ಇನ್ನಷ್ಟೇ ಜಾರಿಗೆ ಬರಬೇಕಿದೆ.

ಕೋವಿಡ್‌-೧೯ ನಿಂದಾಗಿ ದೇಶದಾದ್ಯಂತ ಆದ ಲಾಕ್‌ಡೌನ್‌ನಿಂದಾಗಿ ಜನರ ಸಾಮಾಜಿಕ, ಧಾರ್ಮಿಕ ಆಚರಣೆಗೂ ಧಕ್ಕೆ ಉಂಟಾಗಿರುತ್ತದೆ. ಹಾಗೆಯೇ ಉಡುಪಿ ಜಿಲ್ಲೆಯ ತುಳುನಾಡಿನ ಸಂಸ್ಕೃತಿಯಂತೆ ವರ್ಷಂಪ್ರತಿ ದೈವ ನೇಮೋತ್ಸವ, ಮಾರಿಪೂಜೆ, ನಾಗಾರಾಧನೆ ಮುಂತಾದ ಧಾರ್ಮಿಕ ಸೇವಾ ಕೈಂಕರ್ಯಗಳು ನಡೆಯುತ್ತಲಿರುವುದು ಸರ್ವವಿಧಿತ. ಆದರೆ ಈ ಬಾರಿ ಲಾಕ್ ಡೌನ್ ನಿಂದಾಗಿ ಧಾರ್ಮಿಕ ಸೇವೆಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ನಿಷೇಧವಿದ್ದುದರಿಂದ ಧಾರ್ಮಿಕ ಭಾವನೆಗೆ ಘಾಸಿ ಉಂಟಾಗಿದ್ದಲ್ಲದೇ ದೈವ ಪರಿಚಾರಕರಾದ ನಾಗಸ್ವರ ವಾದಕರು, ಮಡಿವಾಳ, ದರ್ಶನಪಾತ್ರಿ, ಮದ್ಯಸ್ಥರು, ಗರೋಡಿ ವರ್ಗದವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿದಂತೆ ಹಲವಾರು ವರ್ಗದವರ ಆರ್ಥಿಕ ಸ್ಥಿತಿ ಹದಗೆಟ್ಟಿದೆ.

ಆದುದರಿಂದ ತುಳುನಾಡಿನ ದೈವರಾಧನೆ, ಮುಂತಾದ ಧಾರ್ಮಿಕ ಕೈಂಕರ್ಯ ನಡೆಸಲು ೧೦೦ ಜನ ಮೀರದಂತೆ ನಡೆಸಲು ಅವಕಾಶ ನೀಡಬೇಕೆಂದು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ರಘುಪತಿ ಭಟ್‌ ಮನವಿ ಸಲ್ಲಿಸಿದ್ದರು. ಅಲ್ಲದೇ ದೈವ ಪರಿಚಾಕರಿಗೆ ಆರ್ಥಿಕ ಪರಿಸ್ಥಿತಿ ಸುಧಾರಿಸಲು ತಲಾ ೧೦ ಸಾವಿರ ಅನುದಾನ ಮಂಜೂರು ಮಾದುವಂತೆಯೂ ಮನವಿಯಲ್ಲಿ ಕೋರಿದ್ದರು.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 72 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 43 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views