ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ತುಳುನಾಡ ಜನತೆಯ ಪರವಾಗಿ ಸರಕಾರಕ್ಕೆ ಒತ್ತಾಯಿಸುವಂತೆ ತುಳುನಾಡು ಸಂಘಟನೆಗಳಿಂದ ಡಾ. ಹೆಗ್ಗಡೆಯವರಿಗೆ ಮನವಿ

ಧರ್ಮಸ್ಥಳ: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಸರಕಾರಕ್ಕೆ ಸಮಸ್ತ ಜನರ ಪರವಾಗಿ ಒತ್ತಾಯಿಸುವಂತೆ, ಧರ್ಮಸ್ಥಳದ ಮುಖ್ಯ ನಾಮಫಲಕವನ್ನು ತುಳು ಲಿಪಿಯಲ್ಲಿಯೂ ಇರುವಂತೆ ಮತ್ತು ಧರ್ಮಸ್ಥಳದಲ್ಲಿ ಸೂಚನಾ ವ್ಯವಸ್ಥೆಯನ್ನು ತುಳು ಭಾಷೆಯಲ್ಲಿಯೂ ತಿಳಿಸುವಂತೆ ಆಗಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮತ್ತು ಜೈ ತುಲುನಾಡ್ (ರಿ) ಸಂಘಟನೆಯ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಜೈ ತುಳುನಾಡ್ ಇದರ ಬೆಂಗಳೂರು ಘಟಕದ ಸದಸ್ಯರಾದ ಧನಂಜಯ್ ಆಚಾರ್ಯ ಇವರಿಂದ ಓಂ ಎಂದು ತುಳು ಲಿಪಿಯಲ್ಲಿ ಬರೆದಂತಹ ಫಲಕವನ್ನು ಕಾಣಿಕೆಯಾಗಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ನೀಡಿದರು.
ಜೈ ತುಳುನಾಡ್ ಸಂಘಟನೆ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆ ಎಂಬ ತುಳು ಲಿಪಿಯ ನಾಮಫಲಕವನ್ನು ಗೌರವ ಕಾಣಿಕೆಯಾಗಿ ನೀಡಲಾಯಿತು.


ಮನವಿ ಸ್ವೀಕರಿಸಿದ ಡಾ. ಹೆಗ್ಗಡೆಯವರು, ಧರ್ಮಸ್ಥಳ ಕ್ಷೇತ್ರದಲ್ಲಿ ತುಳು ಭಾಷೆಯಲ್ಲಿ ಸೂಚನಾ ವ್ಯವಸ್ಥೆ, ಮುಖ್ಯ ಫಲಕವನ್ನು ತುಳು ಲಿಪಿಯಲ್ಲಿ ಮಾಡುವುದಾಗಿ ಹಾಗೂ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಮನವಿ ಸಲ್ಲಿಸುವುದಾಗಿ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ ಕತ್ತಲ್ಸಾರ್, ಟೈಮ್ಸ್ ಆಫ್ ಕುಡ್ಲ, ತುಳು ಪತ್ರಿಕೆಯ ಸಂಪಾದಕರಾದ ಎಸ್.ಆರ್. ಬಂಡಿಮಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೇತಕ್ ಪೂಜಾರಿ, ಜೈ ತುಳುನಾಡ್ ಸಂಘಟನೆ ಅಧ್ಯಕ್ಷ ಸುದರ್ಶನ್ ಸುರತ್ಕಲ್, ಪ್ರಧಾನ ಕಾರ್ಯದರ್ಶಿ ಸದಾಶಿವ ಮುದ್ರಾಡಿ, ಜೈ ತುಲುನಾಡ್ ಬೆಂಗಳೂರು ಘಟಕದ ಸದಸ್ಯ ಧನಂಜಯ್ ಆಚಾರ್ಯ, ಜೈ ತುಳುನಾಡ್ ಸದಸ್ಯರಾದ ಪೃಥ್ವಿರಾಜ್, ಅಶ್ವಿನ್, ಕವಿತಾ ಆಚಾರ್ಯ, ಅದಿತಿ, ಶ್ರೀಮತಿ ಆಚಾರ್ಯ, ಶ್ರೀನಿಧಿ, ಪ್ರವೀಣ್, ಪ್ರಶಾಂತ್ ಉಪಸ್ಥಿತರಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 5 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ