ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಟ್ವೀಟ್ ಅಭಿಯಾನ! ಲಕ್ಷಕ್ಕೂ ಅಧಿಕ ಟ್ವೀಟ್ ಮೂಲಕ ಕರಾವಳಿಗರ ಕೂಗು ಕೇಂದ್ರಕ್ಕೆ ರವಾನೆ!





ಕುಡ್ಲ: ರಾಜ್ಯದ ಕರಾವಳಿ ಭಾಗದ ಜನರ ಬಾಯಲ್ಲಿ ಕೇಳಲು ಸಿಗೋದು ಒಂದೇ ಭಾಷೆ, ಅದು ತುಳು. ಈ ಭಾಗದ ಜನರು ತುಳುವರೆಂದೇ ಗುರುತಿಸಿಕೊಳ್ಳುತ್ತಾರೆ. ಇಲ್ಲಿನ ಜನತೆಯೂ ಅಷ್ಟೇ ತಮ್ಮನ್ನು ತಾವು ‘ತುಳುವಪ್ಪೆನ ಜೋಕುಲು'(ತುಳು ಅಮ್ಮನ ಮಕ್ಕಳು) ಎಂದೇ ಕರೆಸಿಕೊಳ್ಳುತ್ತಾರೆ. ಅಂದರೆ ಈ ಭಾಷೆಗೆ ಅವರು ತಾಯಿ ಸ್ಥಾನವನ್ನೇ ನೀಡಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಹೀಗೇ ನಾನಾ ಧರ್ಮದ ಜನರಿದ್ದರೂ ಇವರನ್ನೆಲ್ಲಾ ಒಂದಾಗಿಸಿರುವುದು ತುಳು ಭಾಷೆ. ಧರ್ಮ ಎಂಬ ಗಡಿಯನ್ನು ತಳ್ಳಿ ಕರಾವಳಿ ಭಾಗದ ಜನರನ್ನು ಒಂದಾಗಿಸಿದೆ ಈ ಭಾಷೆ. ಸದ್ಯ ಈ ತುಳು ಭಾಷೆಗೆ ಸಾಂವಿಧಾನಿಕ ‌ಮಾನ್ಯತೆ ನೀಡುವಂತೆ ಒತ್ತಾಯಿಸಿ ಕರಾವಳಿಯಲ್ಲಿ ಟ್ವಿಟರ್ ಅಭಿಯಾನ ಆರಂಭವಾಗಿದೆ.

ತುಳು ಸಂಘಟನೆಗಳು ಮತ್ತು ತುಳು ಭಾಷಿಗರರಿಂದ ಆರಂಭವಾಗಿರುವ ಈ ಅಭಿಯಾನ ಬೆಂಬಲಿಸಿ ಸಾವಿರಾರು ಟ್ವೀಟ್ ಗಳು ಹರಿದು ಬರಲಾರಂಭಿಸಿವೆ. ಭಾರತದ ಟ್ವಿಟರ್ ಟ್ರೆಂಡಿಂಗ್‌ನಲ್ಲಿ #TuluOfficialinKA_Kl ಹ್ಯಾಷ್‌ ಟ್ಯಾಗ್ 31ನೇ ಸ್ಥಾನದಲ್ಲಿದೆ. ತುಳು ಭಾಷೆಗೆ ಸಾಂವಿಧಾನಿಕ ‌ಮಾನ್ಯತೆ ನೀಡುವಂತೆ ಒತ್ತಾಯಿಸಿ ಅಭಿಯಾನ ಆರಂಭವಾದಾಗಿನಿಂದ ಈವರೆಗೂ ಲಕ್ಷಕ್ಕೂ ಹೆಚ್ಚು ಟ್ವೀಟ್‌ಗಳಾಗಿದ್ದು, ತುಳುನಾಡಿನ ಜನತೆಯ ಒಗ್ಗಟ್ಟು ಪ್ರದರ್ಶನವಾಗಿದೆ.

ಈ ಹಿಂದೆಯೂ ತುಳುಭಾಷೆಯ ಸ್ಥಾನಮಾನಕ್ಕಾಗಿ ಟ್ವೀಟ್‌ ಅಭಿಯಾನ ಮಾಡಲಾಗಿತ್ತು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ, ಕರಾವಳಿ ಭಾಗದ ರಾಜಕಾರಣಿಗಳು ಅಸಕ್ತಿ ತೋರಿಸಿರಲಿಲ್ಲ. ಹೀಗಾಗಿ ಮತ್ತೆ ಜೈ ತುಳುನಾಡು ಸಂಘಟನೆ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ಆರಂಭಿಸಲಾಗಿದೆ. ಸಂಜೆಯವರೆಗೂ ನಡೆಯಲಿರುವ ಅಭಿಯಾನದಲ್ಲಿ ದೇಶ-ವಿದೇಶಗಳ ತುಳುವರು ಭಾಗಿಯಾಗಲಿದ್ದಾರೆ. 

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ