ದೈವದ ಫೋಟೋ, ವಿಡೀಯೋ ತೆಗೆಯುವವರೇ ಎಚ್ಚರ! – ಕಾನೂನಿನ ಕುಣಿಕೆಗೆ ಬೀಳುವ ದುಸ್ಸಾಹಸ ಮಾಡದಿರಿ!

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸಮಾಜದ ಒಂದು ವರ್ಗ ತುಳುನಾಡಿನ ಪವಿತ್ರ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ ಅಸಂಖ್ಯಾತ ದೈವ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ತುಳುನಾಡ್ ಕುಡ್ಲ ಸಂಘಟನೆಯು ಮಂಗಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ದೈವ ನಂಬಿಕೆಗೆ ಚ್ಯುತಿ ತರುತ್ತಿರುವ ಘಟನೆಗಳು ಪುನರಾವರ್ತನೆಯಾಗುತ್ತಿರುವ ಬೆನ್ನಲ್ಲೇ ಯುವ ತುಳುನಾಡ್ ಕುಡ್ಲ(ರಿ) ಸಂಘಟನೆ ಕಾನೂನಿನ ಮೂಲಕ ಪಾಠ ಕಲಿಸುವ ದಾರಿ ತುಳಿದಿದೆ. ನಂಬಿಕೆಗೆ ಘಾಸಿ ಮಾಡುವವರ ವಿರುದ್ಧ ಯುವ ತುಳುನಾಡ್ ಕುಡ್ಲ ಸಂಘಟನೆ ಕಾನೂನಿನ ಸಮರ ಸಾರಿದೆ.

ದೈವದ ಫೋಟೋಗಳನ್ನು ಬಳಸಿ ಅಸಭ್ಯವಾಗಿ ಎಡಿಟ್ ಮಾಡುವುದು, ನಂಬಿಕೆಗೆ ನೋವುಂಟು ಮಾಡುವ ರೀತಿಯ ಕಲ್ಪನೆಯ ಚಿತ್ರಗಳನ್ನು ಬಿಡಿಸುವುದು, ಸಿನೇಮಾ ಚಿತ್ರದ ಹಾಡುಗಳನ್ನು ಹಾಕಿ ಎಡಿಟ್ ಮಾಡುವುದು, ಮನಸ್ಸಿಗೆ ಘಾಸಿ ಉಂಟು ಮಾಡುವ, ಅಗತ್ಯವೇ ಇಲ್ಲದೆ ಇರುವ ಭಂಗಿಯಲ್ಲಿ ದೈವದ ಫೋಟೋ ತೆಗೆಯುವುದು, ಸಂದಿ ಪಾಡ್ದನ ಬೀರಗಳಲ್ಲಿ ಇಲ್ಲದ ಕಥೆಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೋ ಮಾಡುವುದು ಇವೇ ಮೊದಲಾದ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಸಾಮಾಜಿಕ ಜಾಲತಾಣ ಪೇಜ್, ಗ್ರೂಪ್, ಖಾತೆಗಳ ಮೇಲೆ ದೂರು ಸಲ್ಲಿಸಲಾಗಿದೆ.

ತುಳುನಾಡ ದೈವಾರಧನೆ ಸಸಂಸ್ಕೃತಿ ಮೂಲ ನಂಬಿಕೆ ಉಳಿಸಬೇಕೆಂಬ ನಿಟ್ಟಿನಲ್ಲಿ ಯುವ ತುಳುನಾಡ್ “ತುಳುನಾಡ ಸಂಸ್ಕೃತಿ ಓರಿಪಾಗ” ಅಭಿಯಾನವನ್ನು ಪ್ರಾರಂಭಿಸಿದೆ. ತುಳುನಾಡಿನಾದ್ಯಂತ ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಷೇಧ ಮತ್ತು ತುಳುಲಿಪಿ ಬೊರ್ಡ್ ಮತ್ತು ಮನವಿಗಳನ್ನು ಮಾಡುತ್ತಾ ಬರುತ್ತಿದೆ.

ಈ ಹಿಂದೆಯೂ ಅನೇಕ ಬಾರಿ ಈ ಬಗ್ಗೆ ತುಳುನಾಡಿನಾದ್ಯಂತ ದೈವ ನಂಬಿಕೆಗೆ ಘಾಸಿ ಮಾಡುವವರ ವಿರುದ್ಧ ಭಾರಿ ವಿರೋಧ ವ್ಯಕ್ತವಾಗಿತ್ತು.‌ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಂಬಿಕೆ ಒರಿಪಾಗ ಎನ್ನುವ ಹ್ಯಾಶ್‌ಟ್ಯಾಗ್‌ನಡಿ ಅಭಿಯಾನ ನಡೆದಿತ್ತು. ನೂರಾರು ಜನ ದೈವದ ಭಕ್ತಿಗೀತೆಯನ್ನು ಬರೆಯುವುದಿಲ್ಲ, ದೈವದ ಫೋಟೋವನ್ನು ಲೈಕ್ಸ್‌ಗಾಗಿ ಬಳಸಿಕೊಳ್ಳುವುದಿಲ್ಲ, ಎಡಿಟೆಡ್ ವೀಡಿಯೋ ಪೋಸ್ಟ್ ಮಾಡುವುದಿಲ್ಲ, ಎಡಿಟ್ ಮಾಡುವುದಿಲ್ಲ ಎಂಬ ಪ್ರತಿಜ್ಞೆ ಕೂಡಾ ತೆಗೆದುಕೊಂಡಿದ್ದು ಭಾರೀ ಸುದ್ದಿಯಾಗಿತ್ತು. ಹೀಗಾಗಿ ಎಡಿಟ್ ಮಾಡುವ, ಫೋಟೋ ತೆಗೆಯುವ, ಚಿತ್ರ ಬಿಡಿಸುವ ಮುನ್ನ ಯೋಚಿಸಿ. ಕಾನೂನಿನ ಕುಣಿಕೆಯಲ್ಲಿ ಬೀಳಬೇಡಿ.

ಯುವ ತುಳುನಾಡ್ ಕುಡ್ಲ ಸಂಘಟನೆ ಈಗಾಗಲೇ ಮಂಗಳೂರು ಕಮಿಷನರ್, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈ ಬಗ್ಗೆ ಈಗಾಗಲೇ ದೂರು ದಾಖಲಿಸಿದೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 114 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 31 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 48 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 98 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ