ದೈವದ ಫೋಟೋ, ವಿಡೀಯೋ ತೆಗೆಯುವವರೇ ಎಚ್ಚರ! – ಕಾನೂನಿನ ಕುಣಿಕೆಗೆ ಬೀಳುವ ದುಸ್ಸಾಹಸ ಮಾಡದಿರಿ!

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸಮಾಜದ ಒಂದು ವರ್ಗ ತುಳುನಾಡಿನ ಪವಿತ್ರ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ ಅಸಂಖ್ಯಾತ ದೈವ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ತುಳುನಾಡ್ ಕುಡ್ಲ ಸಂಘಟನೆಯು ಮಂಗಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ದೈವ ನಂಬಿಕೆಗೆ ಚ್ಯುತಿ ತರುತ್ತಿರುವ ಘಟನೆಗಳು ಪುನರಾವರ್ತನೆಯಾಗುತ್ತಿರುವ ಬೆನ್ನಲ್ಲೇ ಯುವ ತುಳುನಾಡ್ ಕುಡ್ಲ(ರಿ) ಸಂಘಟನೆ ಕಾನೂನಿನ ಮೂಲಕ ಪಾಠ ಕಲಿಸುವ ದಾರಿ ತುಳಿದಿದೆ. ನಂಬಿಕೆಗೆ ಘಾಸಿ ಮಾಡುವವರ ವಿರುದ್ಧ ಯುವ ತುಳುನಾಡ್ ಕುಡ್ಲ ಸಂಘಟನೆ ಕಾನೂನಿನ ಸಮರ ಸಾರಿದೆ.

ದೈವದ ಫೋಟೋಗಳನ್ನು ಬಳಸಿ ಅಸಭ್ಯವಾಗಿ ಎಡಿಟ್ ಮಾಡುವುದು, ನಂಬಿಕೆಗೆ ನೋವುಂಟು ಮಾಡುವ ರೀತಿಯ ಕಲ್ಪನೆಯ ಚಿತ್ರಗಳನ್ನು ಬಿಡಿಸುವುದು, ಸಿನೇಮಾ ಚಿತ್ರದ ಹಾಡುಗಳನ್ನು ಹಾಕಿ ಎಡಿಟ್ ಮಾಡುವುದು, ಮನಸ್ಸಿಗೆ ಘಾಸಿ ಉಂಟು ಮಾಡುವ, ಅಗತ್ಯವೇ ಇಲ್ಲದೆ ಇರುವ ಭಂಗಿಯಲ್ಲಿ ದೈವದ ಫೋಟೋ ತೆಗೆಯುವುದು, ಸಂದಿ ಪಾಡ್ದನ ಬೀರಗಳಲ್ಲಿ ಇಲ್ಲದ ಕಥೆಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೋ ಮಾಡುವುದು ಇವೇ ಮೊದಲಾದ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಸಾಮಾಜಿಕ ಜಾಲತಾಣ ಪೇಜ್, ಗ್ರೂಪ್, ಖಾತೆಗಳ ಮೇಲೆ ದೂರು ಸಲ್ಲಿಸಲಾಗಿದೆ.

ತುಳುನಾಡ ದೈವಾರಧನೆ ಸಸಂಸ್ಕೃತಿ ಮೂಲ ನಂಬಿಕೆ ಉಳಿಸಬೇಕೆಂಬ ನಿಟ್ಟಿನಲ್ಲಿ ಯುವ ತುಳುನಾಡ್ “ತುಳುನಾಡ ಸಂಸ್ಕೃತಿ ಓರಿಪಾಗ” ಅಭಿಯಾನವನ್ನು ಪ್ರಾರಂಭಿಸಿದೆ. ತುಳುನಾಡಿನಾದ್ಯಂತ ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಷೇಧ ಮತ್ತು ತುಳುಲಿಪಿ ಬೊರ್ಡ್ ಮತ್ತು ಮನವಿಗಳನ್ನು ಮಾಡುತ್ತಾ ಬರುತ್ತಿದೆ.

ಈ ಹಿಂದೆಯೂ ಅನೇಕ ಬಾರಿ ಈ ಬಗ್ಗೆ ತುಳುನಾಡಿನಾದ್ಯಂತ ದೈವ ನಂಬಿಕೆಗೆ ಘಾಸಿ ಮಾಡುವವರ ವಿರುದ್ಧ ಭಾರಿ ವಿರೋಧ ವ್ಯಕ್ತವಾಗಿತ್ತು.‌ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಂಬಿಕೆ ಒರಿಪಾಗ ಎನ್ನುವ ಹ್ಯಾಶ್‌ಟ್ಯಾಗ್‌ನಡಿ ಅಭಿಯಾನ ನಡೆದಿತ್ತು. ನೂರಾರು ಜನ ದೈವದ ಭಕ್ತಿಗೀತೆಯನ್ನು ಬರೆಯುವುದಿಲ್ಲ, ದೈವದ ಫೋಟೋವನ್ನು ಲೈಕ್ಸ್‌ಗಾಗಿ ಬಳಸಿಕೊಳ್ಳುವುದಿಲ್ಲ, ಎಡಿಟೆಡ್ ವೀಡಿಯೋ ಪೋಸ್ಟ್ ಮಾಡುವುದಿಲ್ಲ, ಎಡಿಟ್ ಮಾಡುವುದಿಲ್ಲ ಎಂಬ ಪ್ರತಿಜ್ಞೆ ಕೂಡಾ ತೆಗೆದುಕೊಂಡಿದ್ದು ಭಾರೀ ಸುದ್ದಿಯಾಗಿತ್ತು. ಹೀಗಾಗಿ ಎಡಿಟ್ ಮಾಡುವ, ಫೋಟೋ ತೆಗೆಯುವ, ಚಿತ್ರ ಬಿಡಿಸುವ ಮುನ್ನ ಯೋಚಿಸಿ. ಕಾನೂನಿನ ಕುಣಿಕೆಯಲ್ಲಿ ಬೀಳಬೇಡಿ.

ಯುವ ತುಳುನಾಡ್ ಕುಡ್ಲ ಸಂಘಟನೆ ಈಗಾಗಲೇ ಮಂಗಳೂರು ಕಮಿಷನರ್, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈ ಬಗ್ಗೆ ಈಗಾಗಲೇ ದೂರು ದಾಖಲಿಸಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 6 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 9 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 7 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 15 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 9 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 15 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.