ದ್ವಿಚಕ್ರವಾಹನ ಕಳ್ಳತನದ ಪ್ರಮುಖ ಐವರು ಆರೋಪಿಗಳ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಪೋಲೀಸರು

ಬೆಳ್ತಂಗಡಿ : ಬೆಳ್ತಂಗಡಿ ಸುತ್ತ ಮುತ್ತ ನಿರಂತರ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೋಲೀಸರು ಯಶಸ್ವಿಯಾಗಿದ್ದಾರೆ

ಈ ಬಗ್ಗೆ ಕಾರ್ಯಾಚರಣೆಗಿಳಿದ ಬೆಳ್ತಂಗಡಿ ಪಿಎಸ್ಐ ಶ್ರೀ ನಂದಕುಮಾರ್ ಎಂಎಂ ಮತ್ತು ಸಿಬ್ಬಂದಿ ಇಂದು ಜೈನ್ ಪೇಟೆ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಎರಡು ಬೈಕಲ್ಲಿ ಬಂದ ಮೂವರನ್ನು ತಡೆದು ನಿಲ್ಲಿಸಿ ಪರಿಶೀಲಿಸಿ ವಿಚಾರಣೆಗೊಳಪಡಿಸಿದ್ದಾರೆ. ಆಗ ಇತ್ತೀಚೆಗೆ ಬೆಳ್ತಂಗಡಿ ಎಸ್ ಡಿ ಎಂ ಕಲಾ ಭವನದ ಮುಂಭಾಗದ ಮನೆಯಿಂದ ಮತ್ತು ಮೂಡಬಿದಿರೆ ಠಾಣಾ ವ್ಯಾಪ್ತಿಯಿಂದ ಕಳವು ಮಾಡಿರುವ ಬೈಕ್ ಎಂಬುದಾಗಿ ಗೊತ್ತಾಗಿದೆ.

ಈ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ನಮ್ಮ ಜೊತೆ ಕುಂಟಿನಿಯ ಇನ್ನಿಬ್ಬರು ಇದ್ದಾರೆ ಎಂದು ತಿಳಿಸಿದ್ದಾರೆ. ಕೂಡಲೇ ಪೊಲೀಸರು ಮತ್ತೆರಡು ಬೈಕಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಸುರತ್ಕಲ್ ನ ಕಾನ ನಿವಾಸಿ ವಿಜಯ ಯಾನೆ ಆಂಜನೇಯ, ಮಂಗಳೂರಿನ ಪ್ರದೀಪ್ ಅಲಿಯಾಸ್ ಚೇತನ್ , ಬಂಟ್ವಾಳ ಬಾಳೆಪುಣಿ ಪೂಪಾಡಿಕಲ್ಲಿನ ಸುದೀಶ್ ಕೆಕೆ ಯಾನೆ ಮುನ್ನ, ಬೆಳ್ತಂಗಡಿ ಲಾಯಿಲ ಗ್ರಾಮದ ಕುಂಟಿನಿ ಮೋಹನ್ ಅಲಿಯಾಸ್ ಪುಟ್ಟ, ಹಾಗೇ ಕುಂಟಿನಿಯ ನಿತಿನ್ ಕುಮಾರ್ ಈ ಐವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 4 ಬೈಕ್ ಕಳವಿಗೆ ಬಳಸಿದ ಓಮ್ನಿ ಕಾರು ಹಾಗೂ ಮೂರು ಲಕ್ಷ ಅರುವತ್ತ ಮೂರು ಸಾವಿರ ರೂಪಾಯಿ ಬೆಲೆ ಬಾಳುವ ಕಳವು ಮಾಡಿರುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಐದು ಜನ ಕಳ್ಳರ ಜಾಲವನ್ನು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಭೇದಿಸಿ ಆತಂಕದಲ್ಲಿದ್ದ ಸಾರ್ವಜನಿಕರಲ್ಲಿ ಪೊಲೀಸರ ಮೇಲೆ ಭರವಸೆ ಮೂಡುವಂತಾಗಿದೆ.

ಇನ್ನು ಪೊಲೀಸ್ ಕಾರ್ಯಾಚರಣೆ ವೇಳೆ ಆರೋಪಿ ಪ್ರದೀಪ್ ಎಂಬಾತ ಪೊಲೀಸ್ ಸಿಬ್ಬಂದಿಗೆ ಕಚ್ಚಿದ್ದಾನೆ. ಪ್ರದೀಪ್ ಮಂಗಳೂರು ಜೈಲಿನಲ್ಲಿ ನಡೆದ ಡಬ್ಬಲ್ ಮಾರ್ಡರ್ ನ ಆರೋಪಿಯಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಗಾಂಜಾ ಕೇಸ್, ಮಂಗಳೂರಲ್ಲಿ ಕೊಲೆ ಯತ್ನ ಮುಂತಾದ ಕೇಸ್ ಈತನ ಮೇಲಿದ್ದು ಈತ ರೌಡಿಶೀಟರ್ ಆಗಿದ್ದಾನೆ.

ಈ ಕಾರ್ಯಾಚರಣೆಯು ಬೆಳ್ತಂಗಡಿ ಪಿಎಸ್ಐ ನಂದಕುಮಾರ್ ಎಂಎಂ ರವರ ನೇತೃತ್ವದಲ್ಲಿ ನಡೆಯಿತು. ಕಾರ್ಯಾಚರಣೆಯಲ್ಲಿ ಪ್ರೊ.ಪಿಎಸ್ಐ ಶರತ್ ಕುಮಾರ್ , ಎಎಸ್ಐ ಗಳಾದ ದೇವಪ್ಪ ಎಂ ಕೆ, ಕೆ ಜೆ ತಿಲಕ್, ಸಿಬ್ಬಂದಿಗಳಾದ ಲಾರೆನ್ಸ್ ಪಿ ಆರ್, ಇಬ್ರಾಹಿಂ, ಅಶೋಕ್, ಚರಣ್ ರಾಜ್, ವೆಂಕಟೇಶ್, ಬಸವರಾಜ್ ರವರು ಪಾಲ್ಗೊಂಡಿದ್ದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ