ಗಣೇಶ ಹಬ್ಬದಂದೆ ಗಣಪತಿ ಕಟ್ಟೆಯನ್ನು ಪುಡಿಗೈದ ಕಿಡಿಗೇಡಿಗಳು! ಕಡಬ ತಾಲೂಕಿನ ಉದನೆಯಲ್ಲಿ ನಡೆದ ಘಟನೆ!

ನೆಲ್ಯಾಡಿ: ಕಡಬ ತಾಲೂಕಿನ ಉದನೆಯಲ್ಲಿ ಯಾರೂ ಕಿಡಿಗೇಡಿಗಳು ಗಣಪತಿ ಕಟ್ಟೆಯನ್ನು ಪುಡಿ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಬೆಳಿಗ್ಗೆಯಷ್ಟೇ ಗಣೇಶೋತ್ಸವ ಅಚರಿಸಲ್ಪಟ್ಟ ಗಣಪತಿ ಕಟ್ಟೆಯನ್ನು ದುಷ್ಕರ್ಮಿಗಳು ರಾತ್ರಿ ವೇಳೆ ಹಾನಿಗೊಳಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ಥಳಕ್ಕೆ ಜಮಾಯಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಬಾಳೆಗಿಡಗಳನ್ನು ಪುಡಿಗೈಯ್ಯಲಾಗಿದ್ದು ಮೆಟ್ಟಿಲನ್ನು ಹಾನಿಗೊಳಿಸಲಾಗಿದೆ. ಕಲ್ಲು ಎತ್ತಿಹಾಕಿ ಮೆಟ್ಟಿಲು ಹಾನಿಗೊಳಿಸಿರುವುದಾಗಿ ಕಂಡು ಬಂದಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು 19ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ ನಿನ್ನೆ ಸರಳವಾಗಿ ಗಣಪತಿ ಮೂರ್ತಿಯ ವಿಸರ್ಜನೆಯನ್ನು ಮಾಡಿದ್ದರು. ಅಲ್ಲದೆ ರಾತ್ರಿ 11:00 ರವರೆಗೂ ಸಮಿತಿಯ ತಂಡ ಗಣಪತಿ ಕಟ್ಟೆಯ ಬಳಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Spread the love
  • Related Posts

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

    Spread the love

    You Missed

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 4 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 24 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 29 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 66 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 235 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ