ಉಡುಪಿಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.

ಸೇನಾ ರ‍್ಯಾಲಿಯಲ್ಲಿ, 38500 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಅವರಿಗೆ ಶೌಚಗೃಹ, ಕುಡಿಯುವ ನೀರಿನ ಸೌಲಭ್ಯ ಒದಗಿಸಿ. ಸ್ವಚ್ಚತೆ, ಶ್ಯಾಮಿಯಾನ, ಬ್ಯಾರಿಕೇಡ್ ಅಳವಡಿಕೆ, ಲೈಟ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ನಿಯೋಜನೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಒಗದಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಲು ಸೂಕ್ತ ಸಿಬ್ಬಂದಿಯನ್ನು ನೇಮಿಸುವಂತೆ ಡಿಡಿಪಿಐ ಗೆ, ರ‍್ಯಾಲಿ ಸ್ಥಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಯ್ಕೆ ನಡೆಸಲು ಆಗಮಿಸುವ ಸೇನಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಹಾಗೂ ಸೂಕ್ತ ವಾಹನಗಳ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ನಗರ ಸಭೆ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಡಿಡಿಪಿಐ ಎನ್.ಹೆಚ್.ನಾಗೂರ, ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ದುಬಾಶ್ ಮತ್ತು ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು