ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣ: ಹಿಂದೂ ಯುವಕನ ತೇಜೊವಧೆಗೆ ಯತ್ನ ಆರೋಪ! ಇತ್ತಂಡಗಳಿಂದ ಬೆಳ್ತಂಗಡಿ ಠಾಣೆಗೆ ದೂರು ಸಲ್ಲಿಕೆ!

ಬೆಳ್ತಂಗಡಿ: ಇತ್ತೀಚೆಗೆ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆಗೆ ಗ್ರಾಸವಾಗಿದ್ದ ವೀಡಿಯೋ ಒಂದನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪವನ್ ಶೆಟ್ಟಿ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ದಿನದಂದು ಎಸ್.ಡಿ.ಪಿ.ಐ ಪಕ್ಷದ ಬೆಂಬಲಿತರು ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾದ ಸಂಭ್ರಮಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲವರು ಪಾಕಿಸ್ಥಾನಕ್ಕೆ ಪರ ಘೋಷಣೆ ಕೂಗಿದ್ದರು ಎಂಬ ಆರೋಪದಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇದಕ್ಕೆ ಪೂರಕವಾಗಿ ಹಿಂದು ಕಾರ್ಯಕರ್ತನೋರ್ವನ ಭಾವಚಿತ್ರ ಬಳಸಿ ಅವಹೇಳನ ಮಾಡಿರುವ ಕುರಿತು ಇಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಗಿದೆ.

ಉಜಿರೆ ನಿವಾಸಿ ಹಿಂದೂ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ‌ ಹರಿಬಿಡಲಾಗಿತ್ತು. ಈ ವಿಚಾರವಾಗಿ ತನ್ನ ಮಾನಹಾನಿಗೆ ಪ್ರಯತ್ನಿಸಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿ.ಐ. ಕಾರ್ಯಕರ್ತರ ವಿರುದ್ಧ ದೂರು ನೀಡಿದ್ದಾರೆ.

ಅದೇ ರೀತಿ ಉಜಿರೆ ಮತದಾನ ಎಣಿಕೆ ವೇಳೆ ಹಿಂದೂ ಕಾರ್ಯಕರ್ತರೇ ದೇಶ ದ್ರೋಹದ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಎಸ್.ಡಿ.ಪಿ.ಐ. ಕಾರ್ಯಕರ್ತರು ಬೆಳ್ತಂಗಡಿ ಠಾಣೆಯಲ್ಲಿ ಪ್ರತಿ ದೂರನ್ನು ನೀಡಿದ್ದಾರೆ.

ಈ ಕುರಿತಂತೆ ಇತ್ತಂಡಗಳ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 75 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views