ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 03/03/2026ರಿಂದ 11/03/2026 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾಗಿದ್ದ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯರವರ ಕನಸು ಮತ್ತು ಸಂಕಲ್ಪದಂತೆ ಭಕ್ತರ ಸಹಕಾರದಿಂದ ನೂತನವಾದ ರಾಜಗೋಪುರ ”ವಿಜಯಗೋಪುರ” ನಿರ್ಮಾಣವಾಗಿದ್ದು ಇದರ ಲೋಕಾರ್ಪಣೆ ಕಾರ್ಯಕ್ರಮವು ಇದೇ ಸಂದರ್ಭದಲ್ಲಿ ನಡೆಯಲಿದೆ. ಈಗಾಗಲೇ ಪೂರ್ವ ತಯಾರಿ ಭರದಿಂದ ಸಾಗುತಿದೆ. ಎಂದು ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಶರತ್ ಕೃಷ್ಣ ಪಡುವೆಟ್ನಾಯ ತಿಳಿಸಿದರು.

ಅವರು ಫೆ.23 ಕೃಷ್ಣಾನುಗ್ರಹ ಸಭಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದಿನಾಂಕ ಮಾರ್ಚ್ 2ರಂದು ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ನಡೆಯಲಿದೆ. ಅಂದು ಪರಮಪೂಜ್ಯ ಶ್ರೀ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಹಂಗಾರಕಟ್ಟೆ ಇವರು ಆಶೀರ್ವಚನ ನೀಡಲಿದ್ದಾರೆ. ನಂತರ 4ನೇ ತಾರೀಕಿನಂದು ಎಡನೀರು ಮಠದ ಶ್ರೀಗಳ ಸಮ್ಮುಖದಲ್ಲಿ ಧರ್ಮಸ್ಥಳದ ಪರಮಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರು ವಿಜಯಗೋಪುರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅದೇ ರೀತಿ ಉಜಿರೆಯ ಕಿರಣ್ ರಾವ್ ಮತ್ತು ಕುಟುಂಬದವರು ದೇವರಿಗೆ ಸಮರ್ಪಿಸುವ ನೂತನ ಬ್ರಹ್ಮರಥದ ಸಮರ್ಪಣೆ ಮತ್ತು ಬೆನಕ ಕನ್‌ಸ್ಟ್ರಕ್ಷನ್ಸ್‌ನ ಶ್ರೀ ಗಣೇಶ್ ಗೌಡ ಮತ್ತು ಕುಟುಂಬದವರು ದೇವರಿಗೆ ಸಮರ್ಪಿಸುವ ನೂತನ ಪುಷ್ಪರಥದ ಸಮರ್ಪಣೆಯು ದಿನಾಂಕ ಮಾರ್ಚ್ 8ರಂದು ಉಡುಪಿ ಪುತ್ತಿಗೆ ಮಠದ ಉಭಯ ಶ್ರೀಗಳ ಅಮೃತಹಸ್ತದಿಂದ ನಡೆಯಲಿದೆ. ಹಾಗೆಯೇಮಾರ್ಚ್11ನೆಯ ತಾರೀಕಿನಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀಗಳು, ಉಡುಪಿಯ ಶ್ರೀ ಸೋದೆಶ್ರೀಗಳು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ, ಶಶಿಧ‌ರ್ ಶೆಟ್ಟಿಯವರ ಕಾರ್ಯಾಧ್ಯಕ್ಷತೆಯಲ್ಲಿ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದೆ.

ಈ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ತಂತ್ರಿವರೇಣ್ಯರಾದ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ಇವರ ನೇತೃತ್ವದಲ್ಲಿ ನಡೆಯಲಿದೆ.

9 ದಿನಗಳ ಕಾಲ ನಡೆಯುವ ಸಭಾಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದ್ರೆ ಡಾ|| ಸ್ವಸ್ತಿ ಶ್ರೀ ಭಟ್ಟಾರಕಚಾರು ಕೀರ್ತಿ ಶ್ರೀಗಳು, ಶ್ರೀಧಾಮ ಮಾಣಿಲದಶ್ರೀಶ್ರೀಶ್ರೀಮೋಹನದಾಸಪರಮಹಂಸಸ್ವಾ ಮೀಜಿಯವರು, ಒಡಿಯೂರು ಮಠದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು, ಶ್ರೀ ರಾಮಚಂದ್ರಾ ಪುರ ಮಠದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು, ಮಂಗಳೂರಿನ ಆದಿಚುಂಚನಗಿರಿ ಶಾಖಾಮಠದ ಶ್ರೀ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು, ಕನ್ಯಾಡಿಯ ಮಹಾಮಂಡಲೇಶ್ವರ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು, ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಭಾಗವಹಿಸಿ ಆಶೀರ್ವಚನವನ್ನು ನೀಡಲಿದ್ದಾರೆ. ಡಾ||ಮೋಹನ ಆಳ್ವ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಾಡಿನ ಗಣ್ಯರು ಮಹನೀಯರು ಮತ್ತು ವಿವಿಧ ಸೇವಾಕರ್ತರು ವಿಶೇಷ ಅಭ್ಯಾಗತರಾಗಿ ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ.

ಪ್ರತಿನಿತ್ಯ ಎರಡು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕೃಷ್ಣಾನುಗ್ರಹ ವೇದಿಕೆ ಮತ್ತು ಪ್ರಧಾನ ವೇದಿಕೆ “ಸುದರ್ಶನ”ದಲ್ಲಿ ಈಕಾರ್ಯಕ್ರಮಗಳು ನಡೆಯಲಿವೆ. ಇದರ ಜೊತೆಗೆ ಸುನಾದ ಭಜನಾ ಕುಟೀರದಲ್ಲಿ ನಿರಂತರ ಭಜನಾ ಸೇವೆ ನಡೆಯಲಿದೆ. ವಿವಿಧ ಸಂಘ ಸಂಸ್ಥೆಯವರು ಮತ್ತು ಭಕ್ತರು ಹೊರೆಕಾಣಿಕೆಯನ್ನು ಈಸಂದರ್ಭದಲ್ಲಿ ಸಮರ್ಪಿಸಲಿದ್ದಾರೆ. ಈ ಎಲ್ಲಾ ಕಾರ್ಯಗಳು ವ್ಯವಸ್ಥಿತವಾಗಿ ನಡೆಯುವ ದೃಷ್ಟಿಯಿಂದ ಅನೇಕ ಸಮಿತಿಗಳನ್ನು ರಚಿಸಿದ್ದೇವೆ. ವಿಶೇಷವಾಗಿ ಭೋಜನ ಶಾಲೆಯ ನಿರ್ಮಾಣವಾಗಿದೆ.

ರಾಜಗೋಪುರ ನಿರ್ಮಾಣ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯ ಮಾರ್ಗದರ್ಶನದಲ್ಲಿ ಊರವರ ಮತ್ತು ಭಕ್ತರ ಸಂಪೂರ್ಣ ಸಹಕಾರದಿಂದ ಈ ಬ್ರಹ್ಮಕಲಶೋತ್ಸವವು ವಿಶೇಷ ರೀತಿಯಲ್ಲಿ ನಡೆಯಲಿದೆ. ಭಗವಂತನ ಸೇವೆ ಮಾಡುವುದಕ್ಕೆ ಭಕ್ತರಿಗೆ ಅವಕಾಶವಿದ್ದು, ಕಲಶಸೇವೆ, ಅನ್ನದಾನ ಸೇವೆ ಮತ್ತು ತ್ರಿಕರಣಪೂರ್ವಕವಾದ ಯಾವುದೇ ವಿಧವಾದ ಸೇವೆ ಮಾಡುವವರು ದೇವಸ್ಥಾನದ ಕಾರ್ಯಾಲಯವನ್ನು ಸಂಪರ್ಕಿಸಬಹುದು. ಈಗಾಗಲೇ ಮೋಹನ್ ಕುಮಾರ್ ನೇತೃತ್ವದಲ್ಲಿ ಅಲಂಕಾರ, ಶ್ರಮದಾನಗಳು ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ. ಮಂಜುನಾಥ್ ಕನ್ಯಾಡಿಯವರ ಸಂಚಾಲಕತ್ವದ ಬೆಂಗಳೂರು ಸಮಿತಿ ವಿಶೇಷ ರೀತಿಯ ಸೇವಾ ಕಾರ್ಯದಲ್ಲಿ ಕೈಜೋಡಿಸಲಿದೆ. ಬರುವ ಭಕ್ತರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ವಾಹನ ನಿಲುಗಡೆಗಾಗಿ ವಿವಿಧ ಕಡೆಗಳಲ್ಲಿ ಸುಮಾರು 8 ಎಕರೆ ಜಾಗ ನಿಗದಿಗೊಳಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಪ್ರತಾಪ್ ಸಿಂಹ ನಾಯಕ್, ಪ್ರಧಾನ ಸಂಚಾಲಕ ಕೆ. ಮೋಹನ್ ಕುಮಾರ್, ರಾಜಗೋಪುರ ನಿರ್ಮಾಣ ಸಮಿತಿ, ಉಪಾಧ್ಯಕ್ಷ ಮೋಹನ್ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಸಪಲ್ಯ, ಬ್ರಹ್ಮಕಲಶೋತ್ಸವ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಸುರಭಿ, ವೆಂಕಟರಮಣ ಶೆಟ್ಟಿ, ಪ್ರಚಾರ ಸಮಿತಿಯ ಭಾಸ್ಕರ ಹೆಗಡೆ,ಪ್ರಕಾಶ್ ಮುದ್ದಣ್ಣಾಯ, ಉಪಸ್ಥಿತರಿದ್ದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 6 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ