ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಉಜಿರೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ)ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಜನಾರ್ದನ ದೇವಸ್ಥಾನ ಉಜಿರೆಯ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ನೆರವೇರಿಸಿದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,’ಹಲವು ಸಂಘಟನೆಗಳ ಸಹಕಾರದಲ್ಲಿ ನಡೆಸುತ್ತಿರುವ ಈ ರಕ್ತದಾನ ಶಿಬಿರ ಮಾದರಿಯಾಗಿದೆ. ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಈ ಕಾರ್ಯಕ್ಕೆ ಎಲ್ಲರೂ ಬಹಳ ಉತ್ಸಾಹದಿಂದ ಕೈಜೋಡಿಸಿದ್ದಾರೆ. ರಕ್ತದಾನದ ಮೂಲಕ ನೀವೆಲ್ಲರು ಪುಣ್ಯದ ಕೆಲಸ ಮಾಡುತ್ತಿದ್ದೀರಿ.’ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆಯ ಅಧ್ಯಕ್ಷರಾದ ಧರ್ಣಪ್ಪಗೌಡ, ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ|ಪೂರನ್ ವರ್ಮಾ, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಸೇವಾ ಭಾರತಿ (ರಿ)ಕನ್ಯಾಡಿಯ ಸಂಸ್ಥಾಪಕರಾದ ವಿನಾಯಕ ರಾವ್ ಕನ್ಯಾಡಿ, ಸಂಘದ ಗೌರವಾಧ್ಯಕ್ಷರಾದ ಪ್ರಕಾಶ್ ಗೌಡ, ಅಪ್ರಮೇಯ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಮೇಶ್ ಪೈಲಾರ್ ಸ್ವಾಗತಿಸಿ, ಸಿ.ಆರ್.ಪಿ. ವಾರಿಜ ನಿರೂಪಿಸಿ, ಶೇಖರ್ ಗೌಡ ಉಜಿರೆ ವಂದಿಸಿದರು.ಒಟ್ಟು 123 ಯೂನಿಟ್ ರಕ್ತ ಸಂಗ್ರಹಿಸಿ ಕೆ.ಎಂ.ಸಿ. ರಕ್ತ ನಿಧಿಗೆ ನೀಡಲಾಯಿತು.

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ