ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿ. ಹಿಂಪ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡುತ್ತಾ
ಉಳಿಯಲು ಜಾಗ ಕೊಟ್ಟ,ಕುಡಿಯಲು ನೀರು, ಬದುಕಲು ಜಾಗ ಉದ್ಯೋಗ ಎಲ್ಲವನ್ನೂ ಕೊಟ್ಟ ನಮ್ಮ ಹೆಮ್ಮೆಯ ದೇಶ ಭಾರತ. ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನದ ಪರ ಘೋಷಣೆ ಹಾಕಿದ ಆ ಮನುಷ್ಯನ ಹುಟ್ಟಡಗಿಸುವಂತೆ ಹೊಡಿಯಲೇಬೇಕು. ಪಕ್ಷ ಯಾವುದೇ ಇರಲಿ, ರಾಷ್ಟ್ರವಿರೋಧಿ ದೇಶವಾದ ಪಾಕಿಸ್ತಾನದ ಪರ ಘೋಷಣೆ ಹೇಳಿದರೆ ಅಂತಹವನನ್ನು ಅಟ್ಟಾಡಿಸಿಕೊಂಡು ಹೊಡೆಯಬೇಕು.

‘ಸರ್ವೇ ಜನಃ ಸುಖಿನೋ ಭವಂತು’ ಎಂದು ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಜನರಿಗೂ ಬದುಕಲು ನೀಡಿದ ಈ ಜಗದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂತಹವರನ್ನು ಸಹಿಸಿಕೊಂಡಿರಲು ಅಸಾಧ್ಯ ಈ ಕಾರಣದಿಂದ sdpi ಹಾಗೂ pfi ಪಕ್ಷಗಳನ್ನು ಬ್ಯಾನ್ ಮಾಡಬೇಕು ಹಾಗೂ ಮೊನ್ನೆ ಚುನಾವಣೆಯಲ್ಲಿ ಗೆದ್ದವರನ್ನು ಚುನಾವಣಾ ಆಯೋಗ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಘೋಷಣೆ ಕೂಗಿದ ಅಪರಾಧಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ ಪೊಲೀಸರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಘೋಷಣೆಯ ಕೂಗಿದವರ ಹಿಂದೆ ಯಾರದೇ ಕೈವಾಡ ಇದ್ದರೂ ಅವರನ್ನೂ ಪತ್ತೆ ಹಚ್ಚಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜಾಮೀನಿಗೆಂದು ಪ್ರತಿ ದಿನವೂ ಠಾಣೆಯ ಎದುರುಗಡೆ ಬರುತ್ತಿದ್ದಾರೆ. ಆದರೆ ಅವರ ಒತ್ತಡಕ್ಕೆ ಮಣಿದು, ಅವರನ್ನು ಬಿಡುಗಡೆಗೊಳಿಸಿದ್ದೆ ಆದರೆ ವಿಶ್ವ ಹಿಂದೂ ಪರಿಷತ್ ನ ಎಲ್ಲಾ ಸದಸ್ಯರೂ ಒಗ್ಗಟ್ಟಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳ ರಸ್ತೆ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ” ಎಂದು ಗುಡುಗಿದರು.

ಭಜರಂಗದಳದ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ವಿ. ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು.

Spread the love
  • Related Posts

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…

    Spread the love

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ…

    Spread the love

    You Missed

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 23 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 143 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 183 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 37 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 53 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 32 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ