ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿ. ಹಿಂಪ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡುತ್ತಾ
ಉಳಿಯಲು ಜಾಗ ಕೊಟ್ಟ,ಕುಡಿಯಲು ನೀರು, ಬದುಕಲು ಜಾಗ ಉದ್ಯೋಗ ಎಲ್ಲವನ್ನೂ ಕೊಟ್ಟ ನಮ್ಮ ಹೆಮ್ಮೆಯ ದೇಶ ಭಾರತ. ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನದ ಪರ ಘೋಷಣೆ ಹಾಕಿದ ಆ ಮನುಷ್ಯನ ಹುಟ್ಟಡಗಿಸುವಂತೆ ಹೊಡಿಯಲೇಬೇಕು. ಪಕ್ಷ ಯಾವುದೇ ಇರಲಿ, ರಾಷ್ಟ್ರವಿರೋಧಿ ದೇಶವಾದ ಪಾಕಿಸ್ತಾನದ ಪರ ಘೋಷಣೆ ಹೇಳಿದರೆ ಅಂತಹವನನ್ನು ಅಟ್ಟಾಡಿಸಿಕೊಂಡು ಹೊಡೆಯಬೇಕು.

‘ಸರ್ವೇ ಜನಃ ಸುಖಿನೋ ಭವಂತು’ ಎಂದು ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಜನರಿಗೂ ಬದುಕಲು ನೀಡಿದ ಈ ಜಗದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂತಹವರನ್ನು ಸಹಿಸಿಕೊಂಡಿರಲು ಅಸಾಧ್ಯ ಈ ಕಾರಣದಿಂದ sdpi ಹಾಗೂ pfi ಪಕ್ಷಗಳನ್ನು ಬ್ಯಾನ್ ಮಾಡಬೇಕು ಹಾಗೂ ಮೊನ್ನೆ ಚುನಾವಣೆಯಲ್ಲಿ ಗೆದ್ದವರನ್ನು ಚುನಾವಣಾ ಆಯೋಗ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಘೋಷಣೆ ಕೂಗಿದ ಅಪರಾಧಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ ಪೊಲೀಸರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಘೋಷಣೆಯ ಕೂಗಿದವರ ಹಿಂದೆ ಯಾರದೇ ಕೈವಾಡ ಇದ್ದರೂ ಅವರನ್ನೂ ಪತ್ತೆ ಹಚ್ಚಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜಾಮೀನಿಗೆಂದು ಪ್ರತಿ ದಿನವೂ ಠಾಣೆಯ ಎದುರುಗಡೆ ಬರುತ್ತಿದ್ದಾರೆ. ಆದರೆ ಅವರ ಒತ್ತಡಕ್ಕೆ ಮಣಿದು, ಅವರನ್ನು ಬಿಡುಗಡೆಗೊಳಿಸಿದ್ದೆ ಆದರೆ ವಿಶ್ವ ಹಿಂದೂ ಪರಿಷತ್ ನ ಎಲ್ಲಾ ಸದಸ್ಯರೂ ಒಗ್ಗಟ್ಟಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳ ರಸ್ತೆ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ” ಎಂದು ಗುಡುಗಿದರು.

ಭಜರಂಗದಳದ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ವಿ. ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ