ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿ. ಹಿಂಪ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡುತ್ತಾ
ಉಳಿಯಲು ಜಾಗ ಕೊಟ್ಟ,ಕುಡಿಯಲು ನೀರು, ಬದುಕಲು ಜಾಗ ಉದ್ಯೋಗ ಎಲ್ಲವನ್ನೂ ಕೊಟ್ಟ ನಮ್ಮ ಹೆಮ್ಮೆಯ ದೇಶ ಭಾರತ. ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನದ ಪರ ಘೋಷಣೆ ಹಾಕಿದ ಆ ಮನುಷ್ಯನ ಹುಟ್ಟಡಗಿಸುವಂತೆ ಹೊಡಿಯಲೇಬೇಕು. ಪಕ್ಷ ಯಾವುದೇ ಇರಲಿ, ರಾಷ್ಟ್ರವಿರೋಧಿ ದೇಶವಾದ ಪಾಕಿಸ್ತಾನದ ಪರ ಘೋಷಣೆ ಹೇಳಿದರೆ ಅಂತಹವನನ್ನು ಅಟ್ಟಾಡಿಸಿಕೊಂಡು ಹೊಡೆಯಬೇಕು.

‘ಸರ್ವೇ ಜನಃ ಸುಖಿನೋ ಭವಂತು’ ಎಂದು ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಜನರಿಗೂ ಬದುಕಲು ನೀಡಿದ ಈ ಜಗದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂತಹವರನ್ನು ಸಹಿಸಿಕೊಂಡಿರಲು ಅಸಾಧ್ಯ ಈ ಕಾರಣದಿಂದ sdpi ಹಾಗೂ pfi ಪಕ್ಷಗಳನ್ನು ಬ್ಯಾನ್ ಮಾಡಬೇಕು ಹಾಗೂ ಮೊನ್ನೆ ಚುನಾವಣೆಯಲ್ಲಿ ಗೆದ್ದವರನ್ನು ಚುನಾವಣಾ ಆಯೋಗ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಘೋಷಣೆ ಕೂಗಿದ ಅಪರಾಧಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ ಪೊಲೀಸರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಘೋಷಣೆಯ ಕೂಗಿದವರ ಹಿಂದೆ ಯಾರದೇ ಕೈವಾಡ ಇದ್ದರೂ ಅವರನ್ನೂ ಪತ್ತೆ ಹಚ್ಚಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜಾಮೀನಿಗೆಂದು ಪ್ರತಿ ದಿನವೂ ಠಾಣೆಯ ಎದುರುಗಡೆ ಬರುತ್ತಿದ್ದಾರೆ. ಆದರೆ ಅವರ ಒತ್ತಡಕ್ಕೆ ಮಣಿದು, ಅವರನ್ನು ಬಿಡುಗಡೆಗೊಳಿಸಿದ್ದೆ ಆದರೆ ವಿಶ್ವ ಹಿಂದೂ ಪರಿಷತ್ ನ ಎಲ್ಲಾ ಸದಸ್ಯರೂ ಒಗ್ಗಟ್ಟಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳ ರಸ್ತೆ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ” ಎಂದು ಗುಡುಗಿದರು.

ಭಜರಂಗದಳದ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ವಿ. ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು.

Spread the love
  • Related Posts

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ಚಿಕ್ಕಮಗಳೂರು (ಜುಲೈ 03): ವಿದ್ಯುತ್ ಆಘಾತದಿಂದ ಬೃಹತ್‌ ಗಾತ್ರದ ಕಾಡಾನೆ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಕಾಡುತ್ತಿದೆ. ಕಾಡಲ್ಲಿ ದಂತ ಹೊಂದಿದ್ದ ಬೃಹತ್…

    Spread the love

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ…

    Spread the love

    You Missed

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 30 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 31 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 57 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 143 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 52 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 11 views