ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿ. ಹಿಂಪ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡುತ್ತಾ
ಉಳಿಯಲು ಜಾಗ ಕೊಟ್ಟ,ಕುಡಿಯಲು ನೀರು, ಬದುಕಲು ಜಾಗ ಉದ್ಯೋಗ ಎಲ್ಲವನ್ನೂ ಕೊಟ್ಟ ನಮ್ಮ ಹೆಮ್ಮೆಯ ದೇಶ ಭಾರತ. ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನದ ಪರ ಘೋಷಣೆ ಹಾಕಿದ ಆ ಮನುಷ್ಯನ ಹುಟ್ಟಡಗಿಸುವಂತೆ ಹೊಡಿಯಲೇಬೇಕು. ಪಕ್ಷ ಯಾವುದೇ ಇರಲಿ, ರಾಷ್ಟ್ರವಿರೋಧಿ ದೇಶವಾದ ಪಾಕಿಸ್ತಾನದ ಪರ ಘೋಷಣೆ ಹೇಳಿದರೆ ಅಂತಹವನನ್ನು ಅಟ್ಟಾಡಿಸಿಕೊಂಡು ಹೊಡೆಯಬೇಕು.

‘ಸರ್ವೇ ಜನಃ ಸುಖಿನೋ ಭವಂತು’ ಎಂದು ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಜನರಿಗೂ ಬದುಕಲು ನೀಡಿದ ಈ ಜಗದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂತಹವರನ್ನು ಸಹಿಸಿಕೊಂಡಿರಲು ಅಸಾಧ್ಯ ಈ ಕಾರಣದಿಂದ sdpi ಹಾಗೂ pfi ಪಕ್ಷಗಳನ್ನು ಬ್ಯಾನ್ ಮಾಡಬೇಕು ಹಾಗೂ ಮೊನ್ನೆ ಚುನಾವಣೆಯಲ್ಲಿ ಗೆದ್ದವರನ್ನು ಚುನಾವಣಾ ಆಯೋಗ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಘೋಷಣೆ ಕೂಗಿದ ಅಪರಾಧಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ ಪೊಲೀಸರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಘೋಷಣೆಯ ಕೂಗಿದವರ ಹಿಂದೆ ಯಾರದೇ ಕೈವಾಡ ಇದ್ದರೂ ಅವರನ್ನೂ ಪತ್ತೆ ಹಚ್ಚಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜಾಮೀನಿಗೆಂದು ಪ್ರತಿ ದಿನವೂ ಠಾಣೆಯ ಎದುರುಗಡೆ ಬರುತ್ತಿದ್ದಾರೆ. ಆದರೆ ಅವರ ಒತ್ತಡಕ್ಕೆ ಮಣಿದು, ಅವರನ್ನು ಬಿಡುಗಡೆಗೊಳಿಸಿದ್ದೆ ಆದರೆ ವಿಶ್ವ ಹಿಂದೂ ಪರಿಷತ್ ನ ಎಲ್ಲಾ ಸದಸ್ಯರೂ ಒಗ್ಗಟ್ಟಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳ ರಸ್ತೆ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ” ಎಂದು ಗುಡುಗಿದರು.

ಭಜರಂಗದಳದ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ವಿ. ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 6 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್