ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿ. ಹಿಂಪ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡುತ್ತಾ
ಉಳಿಯಲು ಜಾಗ ಕೊಟ್ಟ,ಕುಡಿಯಲು ನೀರು, ಬದುಕಲು ಜಾಗ ಉದ್ಯೋಗ ಎಲ್ಲವನ್ನೂ ಕೊಟ್ಟ ನಮ್ಮ ಹೆಮ್ಮೆಯ ದೇಶ ಭಾರತ. ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನದ ಪರ ಘೋಷಣೆ ಹಾಕಿದ ಆ ಮನುಷ್ಯನ ಹುಟ್ಟಡಗಿಸುವಂತೆ ಹೊಡಿಯಲೇಬೇಕು. ಪಕ್ಷ ಯಾವುದೇ ಇರಲಿ, ರಾಷ್ಟ್ರವಿರೋಧಿ ದೇಶವಾದ ಪಾಕಿಸ್ತಾನದ ಪರ ಘೋಷಣೆ ಹೇಳಿದರೆ ಅಂತಹವನನ್ನು ಅಟ್ಟಾಡಿಸಿಕೊಂಡು ಹೊಡೆಯಬೇಕು.

‘ಸರ್ವೇ ಜನಃ ಸುಖಿನೋ ಭವಂತು’ ಎಂದು ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಜನರಿಗೂ ಬದುಕಲು ನೀಡಿದ ಈ ಜಗದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂತಹವರನ್ನು ಸಹಿಸಿಕೊಂಡಿರಲು ಅಸಾಧ್ಯ ಈ ಕಾರಣದಿಂದ sdpi ಹಾಗೂ pfi ಪಕ್ಷಗಳನ್ನು ಬ್ಯಾನ್ ಮಾಡಬೇಕು ಹಾಗೂ ಮೊನ್ನೆ ಚುನಾವಣೆಯಲ್ಲಿ ಗೆದ್ದವರನ್ನು ಚುನಾವಣಾ ಆಯೋಗ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಘೋಷಣೆ ಕೂಗಿದ ಅಪರಾಧಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ ಪೊಲೀಸರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಘೋಷಣೆಯ ಕೂಗಿದವರ ಹಿಂದೆ ಯಾರದೇ ಕೈವಾಡ ಇದ್ದರೂ ಅವರನ್ನೂ ಪತ್ತೆ ಹಚ್ಚಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜಾಮೀನಿಗೆಂದು ಪ್ರತಿ ದಿನವೂ ಠಾಣೆಯ ಎದುರುಗಡೆ ಬರುತ್ತಿದ್ದಾರೆ. ಆದರೆ ಅವರ ಒತ್ತಡಕ್ಕೆ ಮಣಿದು, ಅವರನ್ನು ಬಿಡುಗಡೆಗೊಳಿಸಿದ್ದೆ ಆದರೆ ವಿಶ್ವ ಹಿಂದೂ ಪರಿಷತ್ ನ ಎಲ್ಲಾ ಸದಸ್ಯರೂ ಒಗ್ಗಟ್ಟಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳ ರಸ್ತೆ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ” ಎಂದು ಗುಡುಗಿದರು.

ಭಜರಂಗದಳದ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ವಿ. ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು.

Spread the love
  • Related Posts

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ…

    Spread the love

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ವತಿಯಿಂದ ಹೆಗ್ಗದ್ದೆ ಹಾಗೂ ಕಸಬಾ, ಹೆಬಸ್ಸಾಲೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು…

    Spread the love

    You Missed

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 3 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 3 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 7 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 9 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 12 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 10 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!