ರಸ್ತೆ ಸಾರಿಗೆ ಇಲಾಖೆ ನಿರ್ಲಕ್ಷ್ಯಕ್ಕೆ ಬಸ್ ಅಫಘಾತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಬಸ್ ನ ಸಮಸ್ಯೆ ವಿರೋಧಿಸಿ ವಿಧ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಬೆಳ್ತಂಗಡಿ: ದಿನಾಂಕ 28ರಂದು ಸಂಜೆ ವೇಳೆಗೆ ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್‌ವೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಸರಿದ ಘಟನೆಯೊಂದು ನಡೆದಿತ್ತು. ಸರಿ ಸುಮಾರು 4.30 ಕ್ಕೆ ಈ ಅಪಘಾತ ನಡೆದಿದ್ದು, ಬಸ್‌ನಲ್ಲಿ ವಿದ್ಯಾರ್ಥಿಗಳೇ ಇದ್ದಿದ್ದು, ಬಹುತೇಕ ಮಂದಿಗೆ ಗಾಯವಾಗಿತ್ತು.

ಸಾರಿಗೆ ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿತ್ತು.

ಹಾಗಾಗಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಾರಿಗೆ ಇಲಾಖೆಯ ನಿರ್ಲಕ್ಷ್ಯತೆಯಿಂದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆ ವಿರುದ್ಧ ಪ್ರತಿಭಟನೆಯನ್ನು ಇಂದು ಉಜಿರೆ ಸರ್ಕಲ್‌ ಬಳಿ ಮಾಡಿದೆ.

ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಅದರ ಕಂಡೀಷನ್‌ ಸರಿ ಇಲ್ಲದ ಕಾರಣ ವಿದ್ಯಾರ್ಥಿಗಳು ಮಾತ್ರವಲ್ಲದೇ ಜನರಿಗೆ ಹಾನಿಯುಂಟಾಗುವ ಘಟನೆ ನಡೆದಿದೆ. ಈ ವಿಚಾರದ ವಿರುದ್ಧ ಈಗಾಗಲೇ ವಿದ್ಯಾರ್ಥಿ ಪರಿಷತ್‌ ಅನೇಕ ವರ್ಷಗಳಿಂದ ಬಸ್‌ನ ಸಮಸ್ಯೆ ಸರಿ ಮಾಡಬೇಕು ಜೊತೆಗೆ ಬಸ್‌ನ ಸಂಖ್ಯೆಯನ್ನು ಹೆಚ್ಚು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟವನ್ನು ಮಾಡುತ್ತಾ ಬಂದಿದೆ.

ಆದರೆ ಇಂತಹ ಹೋರಾಟಕ್ಕೆ ಸರಕಾರ ಯಾವುದೇ ರೀತಿಯ ಬೆಲೆಯನ್ನು ಕೊಡದ ನಿಟ್ಟಿನಲ್ಲಿ ಇಂದು ಉಜಿರೆ ಸರ್ಕಲ್‌ನಲ್ಲಿ ವಿದ್ಯಾರ್ಥಿ ಪರಿಷತ್‌ ಹೋರಾಟಕ್ಕೆ ಮುಂದಾಗಿದೆ. ಹಾಗಾಗಿ ಹೋರಾಟ ಸ್ಥಳಕ್ಕೆ ಡಿಪೋ ಮ್ಯಾನೇಜರ್‌ ಬರಬೇಕು ಮತ್ತು ಜನರ ಸಮಸ್ಯೆಯನ್ನು ಆಲಿಸಬೇಕು ಎನ್ನುವುದು ನಮ್ಮ ಬೇಡಿಕೆ ಎಂದು ಜಿಲ್ಲಾ ಸಂಚಾಲಕರಾದ ಸುವಿತ್‌ ಶೆಟ್ಟಿ ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ವಿಭಾಗ ಸಂಘಟನೆಯ ಕಾರ್ಯದರ್ಶಿ ಚಂದ್ರಶೇಖರ್‌ , ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ, ತಾಲೂಕು ಸಂಚಾಲಕ ಪ್ರಾರ್ಥನ್‌ ಗೌಡ ಅವರು ಭಾಗವಹಿಸಿದ್ದು, ಸರಕಾರದ ಅವ್ಯವಸ್ಥೆಯ ವಿರುದ್ಧ ಧ್ವನಿಗೂಡಿಸಿದ್ದಾರೆ.

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಸಕಲೇಶಪುರ, ಜು.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) (ರಿ.) ವತಿಯಿಂದ ಹೆಗ್ಗದ್ದೆ ವಲಯದ ಹಾನುಬಾಳ್ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಡಾ. ನಿಶ್ಚಯ್…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 7 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 6 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 5 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 6 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 8 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 11 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ