ರಸ್ತೆ ಸಾರಿಗೆ ಇಲಾಖೆ ನಿರ್ಲಕ್ಷ್ಯಕ್ಕೆ ಬಸ್ ಅಫಘಾತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಬಸ್ ನ ಸಮಸ್ಯೆ ವಿರೋಧಿಸಿ ವಿಧ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಬೆಳ್ತಂಗಡಿ: ದಿನಾಂಕ 28ರಂದು ಸಂಜೆ ವೇಳೆಗೆ ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್‌ವೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಸರಿದ ಘಟನೆಯೊಂದು ನಡೆದಿತ್ತು. ಸರಿ ಸುಮಾರು 4.30 ಕ್ಕೆ ಈ ಅಪಘಾತ ನಡೆದಿದ್ದು, ಬಸ್‌ನಲ್ಲಿ ವಿದ್ಯಾರ್ಥಿಗಳೇ ಇದ್ದಿದ್ದು, ಬಹುತೇಕ ಮಂದಿಗೆ ಗಾಯವಾಗಿತ್ತು.

ಸಾರಿಗೆ ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿತ್ತು.

ಹಾಗಾಗಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಾರಿಗೆ ಇಲಾಖೆಯ ನಿರ್ಲಕ್ಷ್ಯತೆಯಿಂದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆ ವಿರುದ್ಧ ಪ್ರತಿಭಟನೆಯನ್ನು ಇಂದು ಉಜಿರೆ ಸರ್ಕಲ್‌ ಬಳಿ ಮಾಡಿದೆ.

ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಅದರ ಕಂಡೀಷನ್‌ ಸರಿ ಇಲ್ಲದ ಕಾರಣ ವಿದ್ಯಾರ್ಥಿಗಳು ಮಾತ್ರವಲ್ಲದೇ ಜನರಿಗೆ ಹಾನಿಯುಂಟಾಗುವ ಘಟನೆ ನಡೆದಿದೆ. ಈ ವಿಚಾರದ ವಿರುದ್ಧ ಈಗಾಗಲೇ ವಿದ್ಯಾರ್ಥಿ ಪರಿಷತ್‌ ಅನೇಕ ವರ್ಷಗಳಿಂದ ಬಸ್‌ನ ಸಮಸ್ಯೆ ಸರಿ ಮಾಡಬೇಕು ಜೊತೆಗೆ ಬಸ್‌ನ ಸಂಖ್ಯೆಯನ್ನು ಹೆಚ್ಚು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟವನ್ನು ಮಾಡುತ್ತಾ ಬಂದಿದೆ.

ಆದರೆ ಇಂತಹ ಹೋರಾಟಕ್ಕೆ ಸರಕಾರ ಯಾವುದೇ ರೀತಿಯ ಬೆಲೆಯನ್ನು ಕೊಡದ ನಿಟ್ಟಿನಲ್ಲಿ ಇಂದು ಉಜಿರೆ ಸರ್ಕಲ್‌ನಲ್ಲಿ ವಿದ್ಯಾರ್ಥಿ ಪರಿಷತ್‌ ಹೋರಾಟಕ್ಕೆ ಮುಂದಾಗಿದೆ. ಹಾಗಾಗಿ ಹೋರಾಟ ಸ್ಥಳಕ್ಕೆ ಡಿಪೋ ಮ್ಯಾನೇಜರ್‌ ಬರಬೇಕು ಮತ್ತು ಜನರ ಸಮಸ್ಯೆಯನ್ನು ಆಲಿಸಬೇಕು ಎನ್ನುವುದು ನಮ್ಮ ಬೇಡಿಕೆ ಎಂದು ಜಿಲ್ಲಾ ಸಂಚಾಲಕರಾದ ಸುವಿತ್‌ ಶೆಟ್ಟಿ ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ವಿಭಾಗ ಸಂಘಟನೆಯ ಕಾರ್ಯದರ್ಶಿ ಚಂದ್ರಶೇಖರ್‌ , ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ, ತಾಲೂಕು ಸಂಚಾಲಕ ಪ್ರಾರ್ಥನ್‌ ಗೌಡ ಅವರು ಭಾಗವಹಿಸಿದ್ದು, ಸರಕಾರದ ಅವ್ಯವಸ್ಥೆಯ ವಿರುದ್ಧ ಧ್ವನಿಗೂಡಿಸಿದ್ದಾರೆ.

Spread the love
  • Related Posts

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

    Spread the love

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…

    Spread the love

    You Missed

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 15 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 39 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 25 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 57 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 44 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!