ರಸ್ತೆ ಸಾರಿಗೆ ಇಲಾಖೆ ನಿರ್ಲಕ್ಷ್ಯಕ್ಕೆ ಬಸ್ ಅಫಘಾತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಬಸ್ ನ ಸಮಸ್ಯೆ ವಿರೋಧಿಸಿ ವಿಧ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಬೆಳ್ತಂಗಡಿ: ದಿನಾಂಕ 28ರಂದು ಸಂಜೆ ವೇಳೆಗೆ ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್‌ವೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಸರಿದ ಘಟನೆಯೊಂದು ನಡೆದಿತ್ತು. ಸರಿ ಸುಮಾರು 4.30 ಕ್ಕೆ ಈ ಅಪಘಾತ ನಡೆದಿದ್ದು, ಬಸ್‌ನಲ್ಲಿ ವಿದ್ಯಾರ್ಥಿಗಳೇ ಇದ್ದಿದ್ದು, ಬಹುತೇಕ ಮಂದಿಗೆ ಗಾಯವಾಗಿತ್ತು.

ಸಾರಿಗೆ ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿತ್ತು.

ಹಾಗಾಗಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಾರಿಗೆ ಇಲಾಖೆಯ ನಿರ್ಲಕ್ಷ್ಯತೆಯಿಂದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆ ವಿರುದ್ಧ ಪ್ರತಿಭಟನೆಯನ್ನು ಇಂದು ಉಜಿರೆ ಸರ್ಕಲ್‌ ಬಳಿ ಮಾಡಿದೆ.

ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಅದರ ಕಂಡೀಷನ್‌ ಸರಿ ಇಲ್ಲದ ಕಾರಣ ವಿದ್ಯಾರ್ಥಿಗಳು ಮಾತ್ರವಲ್ಲದೇ ಜನರಿಗೆ ಹಾನಿಯುಂಟಾಗುವ ಘಟನೆ ನಡೆದಿದೆ. ಈ ವಿಚಾರದ ವಿರುದ್ಧ ಈಗಾಗಲೇ ವಿದ್ಯಾರ್ಥಿ ಪರಿಷತ್‌ ಅನೇಕ ವರ್ಷಗಳಿಂದ ಬಸ್‌ನ ಸಮಸ್ಯೆ ಸರಿ ಮಾಡಬೇಕು ಜೊತೆಗೆ ಬಸ್‌ನ ಸಂಖ್ಯೆಯನ್ನು ಹೆಚ್ಚು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟವನ್ನು ಮಾಡುತ್ತಾ ಬಂದಿದೆ.

ಆದರೆ ಇಂತಹ ಹೋರಾಟಕ್ಕೆ ಸರಕಾರ ಯಾವುದೇ ರೀತಿಯ ಬೆಲೆಯನ್ನು ಕೊಡದ ನಿಟ್ಟಿನಲ್ಲಿ ಇಂದು ಉಜಿರೆ ಸರ್ಕಲ್‌ನಲ್ಲಿ ವಿದ್ಯಾರ್ಥಿ ಪರಿಷತ್‌ ಹೋರಾಟಕ್ಕೆ ಮುಂದಾಗಿದೆ. ಹಾಗಾಗಿ ಹೋರಾಟ ಸ್ಥಳಕ್ಕೆ ಡಿಪೋ ಮ್ಯಾನೇಜರ್‌ ಬರಬೇಕು ಮತ್ತು ಜನರ ಸಮಸ್ಯೆಯನ್ನು ಆಲಿಸಬೇಕು ಎನ್ನುವುದು ನಮ್ಮ ಬೇಡಿಕೆ ಎಂದು ಜಿಲ್ಲಾ ಸಂಚಾಲಕರಾದ ಸುವಿತ್‌ ಶೆಟ್ಟಿ ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ವಿಭಾಗ ಸಂಘಟನೆಯ ಕಾರ್ಯದರ್ಶಿ ಚಂದ್ರಶೇಖರ್‌ , ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ, ತಾಲೂಕು ಸಂಚಾಲಕ ಪ್ರಾರ್ಥನ್‌ ಗೌಡ ಅವರು ಭಾಗವಹಿಸಿದ್ದು, ಸರಕಾರದ ಅವ್ಯವಸ್ಥೆಯ ವಿರುದ್ಧ ಧ್ವನಿಗೂಡಿಸಿದ್ದಾರೆ.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ