ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಮನೆಗೆ ಬಂದು ವೃದ್ದೆಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ದೋಚಿದ ಖತರ್ನಾಕ್ ಕಳ್ಳ

ಬೆಳ್ತಂಗಡಿ: ಮನೆಬಾಗಿಲಿಗೆ ಭಿಕ್ಷಾಟನೆ ಸೋಗಿನಲ್ಲಿ ಬರುವ ಅಪರಿಚಿತ ವ್ಯಕ್ತಿಗಳ ಮೇಲೆ ಹೆಚ್ಚು ನಿಗಾವಹಿಸುವುದು ಸೂಕ್ತ. ನಾವು ಅನಾಥಾಶ್ರಮ ಮಾಡುತ್ತಿದ್ದೇವೆ, ನಾವು ಕಡಿಮೆ ದರದಲ್ಲಿ ನೋವಿನ ಎಣ್ಣೆ ನೀಡುತ್ತೇವೆ, ಸುಗಂಧ ದ್ರವ್ಯಗಳನ್ನು ಕಡಿಮೆ ಬೆಲೆಯಲ್ಲಿ ನೀಡುತ್ತೇವೆ ಎಂದು ಮನೆ ಬಾಗಿಲಿಗೆ ಬರುವ ವ್ಯಕ್ತಿಗಳ ಮೇಲೆ ಸಾರ್ವಜನಿಕರು ಒಂದು ಕಣ್ಣಿಡಬೇಕಾದ ಅನಿವಾರ್ಯತೆ ಇದೆ.ಅಂದಹಾಗೆ ಈ ವಿಷಯವನ್ನು ಯಾಕೆ ತಮ್ಮ ಮುಂದೆ ಇಡುತ್ತಿದ್ದೇವೆ ಎಂದರೇ ಎಲ್ಲೋ ದೂರದ ಊರಿನಲ್ಲಿ ಜನವಸತಿ ಇಲ್ಲದ ಪ್ರದೇಶದಲ್ಲಿ ಇಂತಹ ಅಪರಾಧ ಸುದ್ದಿಗಳನ್ನು ನಾವು ಕೇಳುತ್ತಾ ಬಂದಿದ್ದೇವೆ ಆದರೆ ಇತ್ತೀಚಿನ ದಿನಗಳಲ್ಲಿ ತಾಲೂಕಿನ ಹೃದಯ ಭಾಗ ಉಜಿರೆಯ ಸನಿಹದಲ್ಲೇ ಇರುವ ಮನೆಯೊಂದಕ್ಕೆ ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಬಂದು ಚಾಕು ತೋರಿಸಿ ವೃದ್ದೆಯೊಬ್ಬರ ಕತ್ತಿನಲ್ಲಿದ್ದು ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಉಜಿರೆಯ ಹಳೆಪೇಟೆಯಲ್ಲಿ ನಡೆದಿದೆ.

ಘಟನೆಯ ವಿವರ : ಅಂದು 21/04/2023ನೇ ಶುಕ್ರವಾರ ಬೆಳಿಗ್ಗೆ ಸುಮಾರು 11.30ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಉಜಿರೆಯ ಹಳೇಪೇಟೆಯಲ್ಲಿರುವ ಜೈನ್ ಕಂಪೌಂಡ್ ನಲ್ಲಿರುವ ಮನೆಯೊಂದಕ್ಕೆ ಬಂದು ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ ನಮಗೆ‌ ಸಹಕಾರ ನೀಡಿ ವಸ್ತ್ರ ಹಾಗೂ ನಗದು ರೂಪದಲ್ಲಿ ಸಹಕರಿಸಿ ಎಂದು ಮನೆಯೋಡತಿಯಲ್ಲಿ ಕೇಳಿಕೊಳ್ಳುತ್ತಾನೆ ಅಷ್ಟರಲ್ಲೇ ಮನೆಗೆ ಬಂದವರನ್ನು ಬರಿಗೈಯಲ್ಲಿ ಕಳುಹಿಸಿ ಬಾರದೆಂದು ಮಾತೃಹೃದಯೀ(71ವಯಸ್ಸಿನ ವೃದ್ಧೆ) ಮನಸ್ಸು ಕರಗಿಸಿ 2ಸಾರಿ ಹಾಗೂ ನಗದನ್ನು ನೀಡುತ್ತಾರೆ ಅಷ್ಟರಲ್ಲೇ ಅಪರಿಚಿತ ವ್ಯಕ್ತಿ ವೃದ್ದೆಯ ಬಳಿ ಮಾತನಾಡುತ್ತಾ ಮನೆಯಲ್ಲಿ ಯಾರೆಲ್ಲ ಇದ್ದೀರಿ ಎಂಬಿತ್ಯಾದಿ ಮಾಹಿತಿ ಕಲೆಹಾಕುತ್ತಾನೆ ಆದರೆ ಆತನ ನೀಚ ಬುದ್ಧಿಯನ್ನರಿಯದ ವೃದ್ಧೆಯು ಮಗ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದು ಸಂಜೆ ವೇಳೆಗೆ ಮನೆಗೆ ಬರುತ್ತಾನೆ ಮನೆಯ ಇತರೇ ಸದಸ್ಯರು ಹೊರಗಡೆ ಹೋಗಿದ್ದು ತಾನೊಬ್ಬಳೇ ಇರುವ ಬಗ್ಗೆ ತಿಳಿಸುತ್ತಾರೆ. ಇಷ್ಟು ಮಾಹಿತಿಯನ್ನು ಪಡೆದ ಅಪರಿಚಿತ ವ್ಯಕ್ತಿ ಅಲ್ಲಿಂದ ವಾಪಾಸಾಗಿದ್ದಾನೆ. ತದನಂತರ ಮದ್ಯಾಹ್ನ ಬಿರುಬಿಸಿಲಿನ ಸಮಯ ಸುಮಾರು 2ಗಂಟೆಯ ವೇಳೆಯಲ್ಲಿ ಮತ್ತೆ ಆ ಮನೆಗೆ ಚಾಕು ಸಹಿತ ಎಂಟ್ರಿಕೊಟ್ಟವನೇ ಮನೆಯ ಬಾಗಿಲು ತೆರೆದು ವೃದ್ಧೆಯ ಕತ್ತಿಗೆ ಚಾಕು ಇಟ್ಟು ನಗ ಹಾಗೂ ನಗದು ನೀಡುವಂತೆ ಬೆದರಿಕೆ ಹಾಕುತ್ತಾನೆ ಅಷ್ಟರಲ್ಲೇ ಆತನ ಕಣ್ಣಿಗೆ ಬಿದ್ದದ್ದು ಆ ಅಜ್ಜಿಯ ಕುತ್ತಿಗೆಯಲ್ಲಿದ 3ಪವನ್ ತೂಕದ ಮಾಂಗಲ್ಯ ಸರ ಹಾಗೂ ಕಿವಿಯಲ್ಲಿದ್ದ ಕಿವಿಯೊಲೆ. ಕ್ಷಣ ಮಾತ್ರದಲ್ಲಿಯೇ ವೃದ್ದೆ ಯಲ್ಲಿದ್ದ ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿದ್ದಾನೆ.

ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಇದೀಗ ತಾಲೂಕಿನ ಬೇರೆ ಬೇರೆ ಗ್ರಾಮಗಳಲ್ಲಿಯೂ ಇಂತಹದ್ದೇ ತಂಡ ಬಂದಿರುವ ಬಗ್ಗೆ ಸಾರ್ವಜನಿಕರು ಗುಮಾನಿ ವ್ಯಕ್ತಪಡಿಸುತ್ತಿದ್ದಾರೆ. ಏನೇ ಆಗಲಿ ಇಂತಹ ಅಪರಿಚಿತ ವ್ಯಕ್ತಿಗಳು ಮನೆಗೆ ಬಂದಾಗ ಜಾನತಣದಿಂದ ವ್ಯವಹರಿಸುವುದು ಉತ್ತಮ.

ಅಂತಹ ಸಂದೇಹಗಳು ಬಂದರೇ ತಾಲೂಕಿನ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಿ

ಬೆಳ್ತಂಗಡಿ ಪೋಲೀಸ್ ಠಾಣೆ ಸಂಪರ್ಕ: 08256232093

ಧರ್ಮಸ್ಥಳ ಪೋಲೀಸ್ ಠಾಣೆ ಸಂಪರ್ಕ 08256277253

ಪುಂಜಾಲಕಟ್ಟೆ ಪೋಲೀಸ್ ಠಾಣೆ ಸಂಪರ್ಕ 08022943346

ವೇಣೂರು ಪೋಲೀಸ್ ಠಾಣೆ ಸಂಪರ್ಕ 08256286232

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 68 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️