ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಮನೆಗೆ ಬಂದು ವೃದ್ದೆಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ದೋಚಿದ ಖತರ್ನಾಕ್ ಕಳ್ಳ

ಬೆಳ್ತಂಗಡಿ: ಮನೆಬಾಗಿಲಿಗೆ ಭಿಕ್ಷಾಟನೆ ಸೋಗಿನಲ್ಲಿ ಬರುವ ಅಪರಿಚಿತ ವ್ಯಕ್ತಿಗಳ ಮೇಲೆ ಹೆಚ್ಚು ನಿಗಾವಹಿಸುವುದು ಸೂಕ್ತ. ನಾವು ಅನಾಥಾಶ್ರಮ ಮಾಡುತ್ತಿದ್ದೇವೆ, ನಾವು ಕಡಿಮೆ ದರದಲ್ಲಿ ನೋವಿನ ಎಣ್ಣೆ ನೀಡುತ್ತೇವೆ, ಸುಗಂಧ ದ್ರವ್ಯಗಳನ್ನು ಕಡಿಮೆ ಬೆಲೆಯಲ್ಲಿ ನೀಡುತ್ತೇವೆ ಎಂದು ಮನೆ ಬಾಗಿಲಿಗೆ ಬರುವ ವ್ಯಕ್ತಿಗಳ ಮೇಲೆ ಸಾರ್ವಜನಿಕರು ಒಂದು ಕಣ್ಣಿಡಬೇಕಾದ ಅನಿವಾರ್ಯತೆ ಇದೆ.ಅಂದಹಾಗೆ ಈ ವಿಷಯವನ್ನು ಯಾಕೆ ತಮ್ಮ ಮುಂದೆ ಇಡುತ್ತಿದ್ದೇವೆ ಎಂದರೇ ಎಲ್ಲೋ ದೂರದ ಊರಿನಲ್ಲಿ ಜನವಸತಿ ಇಲ್ಲದ ಪ್ರದೇಶದಲ್ಲಿ ಇಂತಹ ಅಪರಾಧ ಸುದ್ದಿಗಳನ್ನು ನಾವು ಕೇಳುತ್ತಾ ಬಂದಿದ್ದೇವೆ ಆದರೆ ಇತ್ತೀಚಿನ ದಿನಗಳಲ್ಲಿ ತಾಲೂಕಿನ ಹೃದಯ ಭಾಗ ಉಜಿರೆಯ ಸನಿಹದಲ್ಲೇ ಇರುವ ಮನೆಯೊಂದಕ್ಕೆ ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಬಂದು ಚಾಕು ತೋರಿಸಿ ವೃದ್ದೆಯೊಬ್ಬರ ಕತ್ತಿನಲ್ಲಿದ್ದು ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಉಜಿರೆಯ ಹಳೆಪೇಟೆಯಲ್ಲಿ ನಡೆದಿದೆ.

ಘಟನೆಯ ವಿವರ : ಅಂದು 21/04/2023ನೇ ಶುಕ್ರವಾರ ಬೆಳಿಗ್ಗೆ ಸುಮಾರು 11.30ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಉಜಿರೆಯ ಹಳೇಪೇಟೆಯಲ್ಲಿರುವ ಜೈನ್ ಕಂಪೌಂಡ್ ನಲ್ಲಿರುವ ಮನೆಯೊಂದಕ್ಕೆ ಬಂದು ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ ನಮಗೆ‌ ಸಹಕಾರ ನೀಡಿ ವಸ್ತ್ರ ಹಾಗೂ ನಗದು ರೂಪದಲ್ಲಿ ಸಹಕರಿಸಿ ಎಂದು ಮನೆಯೋಡತಿಯಲ್ಲಿ ಕೇಳಿಕೊಳ್ಳುತ್ತಾನೆ ಅಷ್ಟರಲ್ಲೇ ಮನೆಗೆ ಬಂದವರನ್ನು ಬರಿಗೈಯಲ್ಲಿ ಕಳುಹಿಸಿ ಬಾರದೆಂದು ಮಾತೃಹೃದಯೀ(71ವಯಸ್ಸಿನ ವೃದ್ಧೆ) ಮನಸ್ಸು ಕರಗಿಸಿ 2ಸಾರಿ ಹಾಗೂ ನಗದನ್ನು ನೀಡುತ್ತಾರೆ ಅಷ್ಟರಲ್ಲೇ ಅಪರಿಚಿತ ವ್ಯಕ್ತಿ ವೃದ್ದೆಯ ಬಳಿ ಮಾತನಾಡುತ್ತಾ ಮನೆಯಲ್ಲಿ ಯಾರೆಲ್ಲ ಇದ್ದೀರಿ ಎಂಬಿತ್ಯಾದಿ ಮಾಹಿತಿ ಕಲೆಹಾಕುತ್ತಾನೆ ಆದರೆ ಆತನ ನೀಚ ಬುದ್ಧಿಯನ್ನರಿಯದ ವೃದ್ಧೆಯು ಮಗ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದು ಸಂಜೆ ವೇಳೆಗೆ ಮನೆಗೆ ಬರುತ್ತಾನೆ ಮನೆಯ ಇತರೇ ಸದಸ್ಯರು ಹೊರಗಡೆ ಹೋಗಿದ್ದು ತಾನೊಬ್ಬಳೇ ಇರುವ ಬಗ್ಗೆ ತಿಳಿಸುತ್ತಾರೆ. ಇಷ್ಟು ಮಾಹಿತಿಯನ್ನು ಪಡೆದ ಅಪರಿಚಿತ ವ್ಯಕ್ತಿ ಅಲ್ಲಿಂದ ವಾಪಾಸಾಗಿದ್ದಾನೆ. ತದನಂತರ ಮದ್ಯಾಹ್ನ ಬಿರುಬಿಸಿಲಿನ ಸಮಯ ಸುಮಾರು 2ಗಂಟೆಯ ವೇಳೆಯಲ್ಲಿ ಮತ್ತೆ ಆ ಮನೆಗೆ ಚಾಕು ಸಹಿತ ಎಂಟ್ರಿಕೊಟ್ಟವನೇ ಮನೆಯ ಬಾಗಿಲು ತೆರೆದು ವೃದ್ಧೆಯ ಕತ್ತಿಗೆ ಚಾಕು ಇಟ್ಟು ನಗ ಹಾಗೂ ನಗದು ನೀಡುವಂತೆ ಬೆದರಿಕೆ ಹಾಕುತ್ತಾನೆ ಅಷ್ಟರಲ್ಲೇ ಆತನ ಕಣ್ಣಿಗೆ ಬಿದ್ದದ್ದು ಆ ಅಜ್ಜಿಯ ಕುತ್ತಿಗೆಯಲ್ಲಿದ 3ಪವನ್ ತೂಕದ ಮಾಂಗಲ್ಯ ಸರ ಹಾಗೂ ಕಿವಿಯಲ್ಲಿದ್ದ ಕಿವಿಯೊಲೆ. ಕ್ಷಣ ಮಾತ್ರದಲ್ಲಿಯೇ ವೃದ್ದೆ ಯಲ್ಲಿದ್ದ ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿದ್ದಾನೆ.

ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಇದೀಗ ತಾಲೂಕಿನ ಬೇರೆ ಬೇರೆ ಗ್ರಾಮಗಳಲ್ಲಿಯೂ ಇಂತಹದ್ದೇ ತಂಡ ಬಂದಿರುವ ಬಗ್ಗೆ ಸಾರ್ವಜನಿಕರು ಗುಮಾನಿ ವ್ಯಕ್ತಪಡಿಸುತ್ತಿದ್ದಾರೆ. ಏನೇ ಆಗಲಿ ಇಂತಹ ಅಪರಿಚಿತ ವ್ಯಕ್ತಿಗಳು ಮನೆಗೆ ಬಂದಾಗ ಜಾನತಣದಿಂದ ವ್ಯವಹರಿಸುವುದು ಉತ್ತಮ.

ಅಂತಹ ಸಂದೇಹಗಳು ಬಂದರೇ ತಾಲೂಕಿನ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಿ

ಬೆಳ್ತಂಗಡಿ ಪೋಲೀಸ್ ಠಾಣೆ ಸಂಪರ್ಕ: 08256232093

ಧರ್ಮಸ್ಥಳ ಪೋಲೀಸ್ ಠಾಣೆ ಸಂಪರ್ಕ 08256277253

ಪುಂಜಾಲಕಟ್ಟೆ ಪೋಲೀಸ್ ಠಾಣೆ ಸಂಪರ್ಕ 08022943346

ವೇಣೂರು ಪೋಲೀಸ್ ಠಾಣೆ ಸಂಪರ್ಕ 08256286232

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 21 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 271 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 186 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 292 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ