ಉಜಿರೆ ಜನಾರ್ದನ‌ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯರವರು ಇನ್ನಿಲ್ಲ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ(78) ಅವರು ಫೆ.19 ರಂದು ಮಧ್ಯಾಹ್ನ ವಯೋಸಹಜವಾಗಿ ತಮ್ಮ ಉಜಿರೆ ಪಡುವೆಟ್ಟು ಮನೆಯಲ್ಲಿ ದೈವಾಧೀನರಾದರು.

ಭಾಗೀರಥಿಯಮ್ಮ ಮತ್ತು ರಾಮಕೃಷ್ಣ ಪಡ್ವೆಟ್ನಾಯ ದಂಪತಿಗಳ ಪುತ್ರರಾದ ಉಜಿರೆಯ ಪಡುವೆಟ್ಟು ಮನೆಯಲ್ಲಿ 1945 ಅ.16 ರಂದು ಜನಿಸಿದ ವಿಜಯರಾಘವ ಪಡ್ವೆಟ್ನಾಯರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರು ಹಾಗೂ ಮೂಡಣ ಹದಿನಾರು ಗ್ರಾಮಗಳ ಗ್ರಾಮಣಿತ್ವ ಹೊಂದಿದ ಅರಮನೆತ್ತಾಯ ಕುಲದಲ್ಲಿ ಜನಿಸಿದವರು.

ಉಜಿರೆಯ ಜನಾರ್ದನ ಶಾಲೆ ಮತ್ತು ಕರ್ನಾಟಕ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದರು. ಪದವೀಧರರಾದರೂ ಹಿರಿಯರ ಕೃಷಿ ಭೂಮಿಯನ್ನೇ ಕರ್ಮಕ್ಷೇತ್ರವನ್ನಾಗಿ ಕೃಷಿಯಲ್ಲೇ ತಮ್ಮ ಆಸಕ್ತಿ; ಅಭಿರುಚಿಯನ್ನು ಬೆಳೆಸಿಕೊಂಡು ಆದರ್ಶ ಕೃಷಿಕರೆನಿಸಿಕೊಂಡರು.

ಉಜಿರೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿ ನಿರ್ದೇಶಕರಾಗಿ, ಮಾರ್ಗದರ್ಶಕರಾಗಿ ಸಂಘದ ಅಭ್ಯುದಯಕ್ಕೆ ಕಾರಣರಾಗಿದ್ದಾರೆ. ಉಜಿರೆ ಲಯನ್ಸ್ ಕ್ಲಬ್ಬಿನ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಉಜಿರೆ ಬ್ರಾಹ್ಮಣ ಸಂಘಟನೆಗಾಗಿ ಶ್ರೀ ಜನಾರ್ದನ ಸ್ವಾಮಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸ್ಥಾಪಿಸಿದ್ದರು.

ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಗೌರವಾಧ್ಯಕ್ಷರಾಗಿ, ತುಳು ಶಿವಳ್ಳಿ ಸ‘ಲಭಾ (ಬೆಳ್ತಂಗಡಿ)ದ ಅಧ್ಯಕ್ಷರಾಗಿ 8 ವಲಯಗಳನ್ನು ರಚಿಸಿ ಸಮಾಜ ಸಂಘಟನೆ ಕಾರ್ಯ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕು ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷರಾಗಿ, ಉಜಿರೆ ವರ್ತಕ ಸಂಘದ ಸ್ಥಾಪಕಧ್ಯಕ್ಷರಾಗಿ, ತಾಲೂಕಿನಾದ್ಯಂತ ನಡೆಯುತ್ತಿರುವ ಹಿಂದೂ ಸಮಾಜೋತ್ಸವಗಳಲ್ಲಿ ಮಾರ್ಗದರ್ಶನ ನೀಡುತ್ತ ಬಂದಿದ್ದಾರೆ.

ಉಜಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಶಾರದಾ ಪೂಜಾ ಸಮಿತಿ ಗೌರವಾಧ್ಯಕ್ಷರಾಗಿ, ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಗ್ನೇಯ ಪಾರ್ಶ್ವದಲ್ಲಿ ಮಧ್ವಮಂಟಪ ರಚಿಸಿ ಅಲ್ಲಿ ಶ್ರೀ ಮಧ್ವಾಚಾರ್ಯರ ಪ್ರತಿಮೆಯನ್ನು ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳವರ ಮೂಲಕ ಪ್ರತಿಷಾಪಿಸಿ, ಆಚಾರ್ಯರು ಕುಳಿತು ಗ್ರಂಥ ಬರೆದ ಶಿಲೆಯನ್ನು ಸಂರಕ್ಷಿಸಿರುವುದು ಪ್ರತೀತಿ.

ಯಕ್ಷಗಾನ ಪ್ರದರ್ಶನ ಹಾಗೂ ತಾಳಮದ್ದಳೆ ಸಪ್ತಾಹಗಳನ್ನು ನಡೆಸಿ ಕಲಾಭಿಮಾನಿಗಳ ಮನತಣಿಸಿದ್ದಾರೆ. ಅದಲ್ಲದೆ ತಾಲೂಕಿನ ಅದೆಷ್ಟೋ ದೇವಸ್ಥಾನಗಳ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವಕ್ಕೆ ಕಾರಣೀಕರ್ತರು. ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಂಬನಿ ಮಿಡಿದಿದ್ದಾರೆ. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಕೆ.ವಸಂತ ಬಂಗೇರ ಸಹಿತ ಅನೇಕರು ಕಂಬನಿ ಸಂತಾಪ ಸೂಚಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ