ಉಜಿರೆ ಜನಾರ್ದನ‌ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯರವರು ಇನ್ನಿಲ್ಲ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ(78) ಅವರು ಫೆ.19 ರಂದು ಮಧ್ಯಾಹ್ನ ವಯೋಸಹಜವಾಗಿ ತಮ್ಮ ಉಜಿರೆ ಪಡುವೆಟ್ಟು ಮನೆಯಲ್ಲಿ ದೈವಾಧೀನರಾದರು.

ಭಾಗೀರಥಿಯಮ್ಮ ಮತ್ತು ರಾಮಕೃಷ್ಣ ಪಡ್ವೆಟ್ನಾಯ ದಂಪತಿಗಳ ಪುತ್ರರಾದ ಉಜಿರೆಯ ಪಡುವೆಟ್ಟು ಮನೆಯಲ್ಲಿ 1945 ಅ.16 ರಂದು ಜನಿಸಿದ ವಿಜಯರಾಘವ ಪಡ್ವೆಟ್ನಾಯರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರು ಹಾಗೂ ಮೂಡಣ ಹದಿನಾರು ಗ್ರಾಮಗಳ ಗ್ರಾಮಣಿತ್ವ ಹೊಂದಿದ ಅರಮನೆತ್ತಾಯ ಕುಲದಲ್ಲಿ ಜನಿಸಿದವರು.

ಉಜಿರೆಯ ಜನಾರ್ದನ ಶಾಲೆ ಮತ್ತು ಕರ್ನಾಟಕ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದರು. ಪದವೀಧರರಾದರೂ ಹಿರಿಯರ ಕೃಷಿ ಭೂಮಿಯನ್ನೇ ಕರ್ಮಕ್ಷೇತ್ರವನ್ನಾಗಿ ಕೃಷಿಯಲ್ಲೇ ತಮ್ಮ ಆಸಕ್ತಿ; ಅಭಿರುಚಿಯನ್ನು ಬೆಳೆಸಿಕೊಂಡು ಆದರ್ಶ ಕೃಷಿಕರೆನಿಸಿಕೊಂಡರು.

ಉಜಿರೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿ ನಿರ್ದೇಶಕರಾಗಿ, ಮಾರ್ಗದರ್ಶಕರಾಗಿ ಸಂಘದ ಅಭ್ಯುದಯಕ್ಕೆ ಕಾರಣರಾಗಿದ್ದಾರೆ. ಉಜಿರೆ ಲಯನ್ಸ್ ಕ್ಲಬ್ಬಿನ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಉಜಿರೆ ಬ್ರಾಹ್ಮಣ ಸಂಘಟನೆಗಾಗಿ ಶ್ರೀ ಜನಾರ್ದನ ಸ್ವಾಮಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸ್ಥಾಪಿಸಿದ್ದರು.

ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಗೌರವಾಧ್ಯಕ್ಷರಾಗಿ, ತುಳು ಶಿವಳ್ಳಿ ಸ‘ಲಭಾ (ಬೆಳ್ತಂಗಡಿ)ದ ಅಧ್ಯಕ್ಷರಾಗಿ 8 ವಲಯಗಳನ್ನು ರಚಿಸಿ ಸಮಾಜ ಸಂಘಟನೆ ಕಾರ್ಯ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕು ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷರಾಗಿ, ಉಜಿರೆ ವರ್ತಕ ಸಂಘದ ಸ್ಥಾಪಕಧ್ಯಕ್ಷರಾಗಿ, ತಾಲೂಕಿನಾದ್ಯಂತ ನಡೆಯುತ್ತಿರುವ ಹಿಂದೂ ಸಮಾಜೋತ್ಸವಗಳಲ್ಲಿ ಮಾರ್ಗದರ್ಶನ ನೀಡುತ್ತ ಬಂದಿದ್ದಾರೆ.

ಉಜಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಶಾರದಾ ಪೂಜಾ ಸಮಿತಿ ಗೌರವಾಧ್ಯಕ್ಷರಾಗಿ, ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಗ್ನೇಯ ಪಾರ್ಶ್ವದಲ್ಲಿ ಮಧ್ವಮಂಟಪ ರಚಿಸಿ ಅಲ್ಲಿ ಶ್ರೀ ಮಧ್ವಾಚಾರ್ಯರ ಪ್ರತಿಮೆಯನ್ನು ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳವರ ಮೂಲಕ ಪ್ರತಿಷಾಪಿಸಿ, ಆಚಾರ್ಯರು ಕುಳಿತು ಗ್ರಂಥ ಬರೆದ ಶಿಲೆಯನ್ನು ಸಂರಕ್ಷಿಸಿರುವುದು ಪ್ರತೀತಿ.

ಯಕ್ಷಗಾನ ಪ್ರದರ್ಶನ ಹಾಗೂ ತಾಳಮದ್ದಳೆ ಸಪ್ತಾಹಗಳನ್ನು ನಡೆಸಿ ಕಲಾಭಿಮಾನಿಗಳ ಮನತಣಿಸಿದ್ದಾರೆ. ಅದಲ್ಲದೆ ತಾಲೂಕಿನ ಅದೆಷ್ಟೋ ದೇವಸ್ಥಾನಗಳ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವಕ್ಕೆ ಕಾರಣೀಕರ್ತರು. ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಂಬನಿ ಮಿಡಿದಿದ್ದಾರೆ. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಕೆ.ವಸಂತ ಬಂಗೇರ ಸಹಿತ ಅನೇಕರು ಕಂಬನಿ ಸಂತಾಪ ಸೂಚಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    You Missed

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 4 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 7 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 13 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 13 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ