ಸಾರಿಗೆ ಸಂಸ್ಥೆಯಲ್ಲೂ ಯುಪಿಐ ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಜಾರಿ, ಡಿಜಿಟಲ್‌ ಪಾವತಿ ವ್ಯವಸ್ಥೆ ಅನುಷ್ಠಾನಕ್ಕೆ ಮುಂದಾದ NWKRTC

ಬೆಳಗಾವಿ: ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು ಯುಪಿಐ ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಪ್ರಾಯೋಗಿಕ ಜಾರಿ ಬಗ್ಗೆ ಮಾಹಿತಿ ಹಂಚಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ವ್ಯವಸ್ಥೆ ಯಶಸ್ವಿಯಾದರೆ, ಉಳಿದ ನಿಗಮಗಳಿಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ಅನುಷ್ಠಾನ ಮಾಡಲಾಗುವುದು. ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇನ್ನು ಮುಂದೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC)ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು ಯುಪಿಐ ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, “ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಟಿಕೆಟ್‌ಗಳಿಗೆ ನಗದು ರಹಿತ ವಹಿವಾಟುಗಳನ್ನು ಉತ್ತೇಜಿಸಲು ಪ್ರಾಯೋಗಿಕ ಆಧಾರದ ಮೇಲೆ ಯುಪಿಐ ಆಧಾರಿತ ಪಾವತಿಗಳನ್ನು ಪ್ರಾರಂಭಿಸಿದೆ” ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಈ ಡಿಜಿಟಲ್‌ ಪಾವತಿ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಬಸ್‌ಗಳಲ್ಲಿ ಮಾತ್ರ ಜಾರಿ ಮಾಡಲಾಗಿದ್ದು, ಒಂದು ವೇಳೆ ಇದು ಯಶಸ್ವಿಯಾದರೆ, ಉಳಿದ ನಿಗಮಗಳಿಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ಅನುಷ್ಠಾನಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರು ಬಿಎಂಟಿಸಿಯಲ್ಲಿ ಈಗಾಗಲೇ ಈ ವ್ಯವಸ್ಥೆ ಚಾಲ್ತಿಯಲ್ಲಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ಭರತ್ ಎಸ್, ಪ್ರಾಯೋಗಿಕವಾಗಿ 10 ಬಸ್‌ಗಳಲ್ಲಿ ಅಳವಡಿಸಿದ್ದೇವೆ. ಇದು ಯಶಸ್ವಿಯಾದರೆ ಎಲ್ಲಾ ಬಸ್‌ಗಳಲ್ಲಿ ಅಳವಡಿಸುವ ಚಿಂತನೆ ಮಾಡುತ್ತಿದ್ದೇವೆ. ಸದ್ಯಕ್ಕೆ ವಾಯವ್ಯ ಕರ್ನಾಟಕ ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು ಯುಪಿಐ ಮೂಲಕ ಪ್ರಯಾಣಿಕರು ಹಣ ಪಾವತಿಸಬಹುದು. ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು ಹಾಗೂ ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಯುಪಿಐ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದರು.

ಆರಂಭದಲ್ಲಿ ಪ್ರಾಯೋಗಿಕವಾಗಿ ಹುಬ್ಬಳ್ಳಿ ಗ್ರಾಮಾಂತರ 3ನೇ ಡಿಪೋ ಬಸ್ಸುಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದರ ಸಾಧಕ-ಬಾಧಕಗಳು ಹಾಗೂ ಸಾರ್ವಜನಿಕ ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ಇತರೆ ಬಸ್ಸುಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ” ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ಮುಖ್ಯಸ್ಥ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.

ಯುಪಿಐ ಟಿಕೆಟ್ ಮಾದರಿ

ಬಸ್‌ಗಳಲ್ಲಿ ಚಿಲ್ಲರೆಗಾಗಿ ಹೊಡೆದಾಟ ನಡೆಯುವ ಸುದ್ದಿಗಳು ಕಿವಿಗೆ ಬೀಳುತ್ತಿರುವ ಮಧ್ಯೆಯೇ ಸಾರಿಗೆ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದ್ದು, ಯಶಸ್ವಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಆ ಮೂಲಕ ಚಿಲ್ಲರೆ ಸಮಸ್ಯೆ ನೀಗಬಹುದು ಎಂದು ಅಂದಾಜಿಸಲಾಗಿದೆ.

‘ಬಸ್‌ನಲ್ಲೀ ಈ ಮೊದಲು ಗೂಗಲ್ ಪೇ, ಪೋನ್‌ಪೇ ಆಗುತ್ತಿರಲಿಲ್ಲ. ಚಿಲ್ಲರೆ ಸಮಸ್ಯೆ ತಪ್ಪುತ್ತದೆ. ಇದರಿಂದ ಬಹಳ ಅನುಕೂಲ ಆಗಿದೆ’ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 204 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 48 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 51 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 111 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 47 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 89 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ