ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ.

ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್ ,ಸೌತ್ ಆಫ್ರಿಕಾ ,ಶ್ರೀಲಂಕಾ ಹಾಗು ಭಾರತದ ಮಹಿಳಾ ತಂಡಗಳು ಭಾಗವಸಲಿದೆ ಕೇವಲ 14 ವಯಸ್ಸಿನ ಈಕೆ U.A.E ಯ ಅಂತಾರಾಷ್ಟ್ರೀಯ ಇಂಡೋರ್ ಕ್ರಿಕೆಟ್ ತಂಡದ ಕಿರಿಯ ಆಟಗಾರ್ತಿಯಾಗಿದ್ದು, ಕರ್ನಾಟಕ ಮೂಲದ ಆಟಗಾರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಸದ್ಯ ದುಬೈ ಜೆ ಸ್ ಸ್ ಪ್ರೈವೇಟ್ ಸ್ಕೂಲ್ನಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ಅಮಿಷ ಆನಂದ್, ದುಬೈ ಯಲ್ಲಿ ನೆಲೆಸಿರುವ ಕ್ರೀಡಾ ಪ್ರೇಮಿ ಹಾಗು ಪ್ರೋತ್ಸಹಿ ಆನಂದ್ ಪಟ್ಟೆ ಮತ್ತು ವಿನುತಾ ಆನಂದ್ ದಂಪತಿಯ ಏಕೈಕ ಮಗಳು ಸೀಸನ್(ಹಾರ್ಡ್)ಬಾಲ್ ನಲ್ಲಿ U.A.E ಕ್ರಿಕೆಟ್ ಬೋರ್ಡ್ ನ ಅಂಡರ್ 15,16 ಮತ್ತು ಅಂಡರ್ 19ರ ಹುಡಿಗಿಯರ ವಿಭಾಗದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯ ಕೂಟದಲ್ಲಿ ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ , ಅಮೇರಿಕಾ ಹಾಗು ಓಮನ್ ತಂಡಗಳೆದುರು U.A.E ಪರವಾಗಿ ಆಡಿದ ಅನುಭವ ಇದೆ.ಇಂಗ್ಲೆಂಡ್ನ ಕ್ರಿಕೆಟ್ ಆಟಗಾರ ಜೋ ರೂಟ್ ಕ್ರಿಕೆಟ್ ಅಕೆಡೆಮಿ ವತಿಯಿಂದ ನಡೆಯಲ್ಪಡುವ ರೂಟ್ ಕಪ್ ಅಂಡರ್ 16 ಹುಡುಗಿಯರ ವಿಭಾದಲ್ಲಿ ಸತತ ಎರಡನೇ ಬಾರಿ ದುಬೈ ತಂಡವನ್ನು ಪ್ರತಿನಿಧಿಸಿ , ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ ಇಂಗ್ಲೆಂಡ್ ಹಾಗು ನ್ಯೂಜಿಲ್ಯಾಂಡ್ ತಂಡಗಳನ್ನು ಸೋಲಿಸಿ UAE ತಂಡವು ರೂಟ್ ಕಪ್ ನ್ನು ಗೆದ್ದುಕೊಂಡಿತ್ತು. ಬಹುಮುಖ ಪ್ರತಿಭೆಯಾಗಿರುವ ಈಕೆ ಕ್ರಿಕೆಟಿನೊಂದಿಗೆ ವಾಲಿಬಾಲ್ ,ಅಥ್ಲೆಟಿಕ್ ,ಈಜುಗಾರಿಕೆ ಹಾಡುಗಾರಿಕೆ ಹಾಗು ನ್ರಿತ್ಯದಲ್ಲೂ ಮುಂಚೂಣಿಯಲ್ಲಿದ್ದಾಳೆ. U.A.Eಯ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ನಿಶಾ ಆಲಿ ಗರಡಿಯಲ್ಲಿ ತರಬೇತಿ ಪಡೆಯುತಿದ್ದು , U.A.E ಯ ಮಾಜಿ ನಾಯಕಿ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗು ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ನ ಅಧಿಕಾರಿಯಾಗಿರುವ ಛಾಯ ಮುದ್ದ್ಗಲ್ ಮಾರ್ಗದರ್ಶನದೊಂದಿಗೆ ಅಂತಾರಾಷ್ಟ್ರೀಯಯ ಕ್ರಿಕೆಟಿಗೆ ತಯಾರಾಗುತಿದ್ದಾಳೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ