ಉಪ್ಪಿನಂಗಡಿ ಮುಳಿಯದಲ್ಲಿ ಶಾಲಾ ಮಕ್ಕಳಿಗೆ ಭತ್ತ ಬೇಸಾಯದ ಅನುಭವಕ್ಕಾಗಿ ಭತ್ತ ನಾಟಿ – 2024 ಕಾರ್ಯಕ್ರಮ

ಉಪ್ಪಿನಂಗಡಿ : ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯ ನೇತೃತ್ವದಲ್ಲಿ ಮಕ್ಕಳಿಗೆ ಭತ್ತ ಬೇಸಾಯದ ಅನುಭವ ನೀಡುವ ಉದ್ದೇಶದಿಂದ, ಭತ್ತ ನಾಟಿ ಕಾರ್ಯಕ್ರಮದ ಜುಲೈ 27 ಶನಿವಾರದಂದು, ಉಪ್ಪಿನಂಗಡಿಯ ಮುಳಿಯದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ಸದಸ್ಯರಾಗಿರುವ ಜಯಪ್ರಸಾದ್ ಕಡಮ್ಮಾಜೆ ಇವರು ಉದ್ಘಾಟಿಸಿದರು. ಅಮೂಲ್ಯ ಗ್ಯಾಸ್ ಏಜೆನ್ಸಿ ಉಪ್ಪಿನಂಗಡಿಯ ಮಾಲಕರಾಗಿರುವ ಮಾಜಿ ಸೈನಿಕ ಚಂದಪ್ಪ ಮೂಲ್ಯ ಇವರು ಮಕ್ಕಳಿಗೆ ಭತ್ತ ಬೇಸಾಯದ ಅನಿವಾರ್ಯತೆಯ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಿಲ್ ಅಣಾವು ವಹಿಸಿದ್ದರು, ಕಾರ್ಯಕ್ರಮದಲ್ಲಿ ‌ ಮುಳಿಯ ಮನೆಯ ಹಿರಿಯರಾದ ಶ್ರೀಮತಿ ಕಲಾವತಿ ಹೆಗ್ಡೆ, ಶಾಲೆಯ ಸಂಚಾಲಕರಾದ ಯು ಜಿ ರಾಧ, ಉಪಾಧ್ಯಕ್ಷರಾದ ಶ್ರೀಮತಿ ಅನುರಾಧ ಆರ್ ಶೆಟ್ಟಿ, ಸದಸ್ಯರಾದ ಶ್ರೀ ಗುಣಕರ ಅಗ್ನಾಡಿ, ಜಯಂತ್ ಪೊರೋಳಿ, ಪೋಷಕ ಸಂಘದ ಅಧ್ಯಕ್ಷರಾದ ಶ್ರೀ ಉದಯ ಅತ್ರಮಜಲು, ಮಾತೃಭಾರತಿಯ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾಪ್ರಭಾ, ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಎಚ್ ಕೆ ಪ್ರಕಾಶ್, ಶ್ರೀ ಸುಂದರ ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ವಿಮಲ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ದೈವ ನರ್ತಕರಾದ ಶ್ರೀ ಕೂಸಪ್ಪ ಮಿತ್ತಿಲ, ಇಳಂತಿಲ, ಭತ್ತ ಕೃಷಿಕ ಚಿದಾನಂದ ಸಾಲ್ಯಾನ್ ಮತ್ತು ಶಾಲೆಗೆ ಭತ್ತ ಬೇಸಾಯ ಮಾಡಲು ತಮ್ಮ ಗದ್ದೆ ನೀಡಿ ಸಹಕರಿಸಿದ ಮುಳಿಯ ಮನೆಯ ಹಿರಿಯರಾದ ಕಲಾವತಿ ಹೆಗ್ಡೆ ಇವರನ್ನು ಗೌರವಿಸಲಾಯಿತು.

ಗದ್ದೆಗೆ ಅತಿಥಿವರ್ಯರು ಹಾಲೆರೆದು, ನೇಜಿ ನೆಡುವ ಕೆಲಸಕ್ಕೆ ಚಾಲನೆ ನೀಡಿದರು.‌‌ ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕೆಸರುಗದ್ದೆಯ ಓಟ, ಹಗ್ಗಜಗ್ಗಾಟ, ಕಂಬಳ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳು ಮತ್ತು ಕಾಲೇಜು ವಿಭಾಗದ ವಿದ್ಯಾರ್ಥಿಗಳು ಆಗಮಿಸಿ, ಗದ್ದೆಯಲ್ಲಿ ಆಟವಾಡಿ ನೇಜಿನೆಟ್ಟು ಭತ್ತ ಬೇಸಾಯದ ಬಗ್ಗೆ ಅರಿತುಕೊಂಡರು. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕು| ಅನ್ವಿ ಸ್ವಾಗತಿಸಿ, ಕು| ಶಿವಾನಿ ಮತ್ತು ಕು| ಭವಿಷ್ಯ ಕಾರ್ಯಕ್ರಮ ನಿರೂಪಿಸಿದರು, ಕು| ಯಶ್ವಿತ ವಂದಿಸಿದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 118 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 32 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 48 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 98 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ