ಉಪ್ಪಿನಂಗಡಿ ಮುಳಿಯದಲ್ಲಿ ಶಾಲಾ ಮಕ್ಕಳಿಗೆ ಭತ್ತ ಬೇಸಾಯದ ಅನುಭವಕ್ಕಾಗಿ ಭತ್ತ ನಾಟಿ – 2024 ಕಾರ್ಯಕ್ರಮ

ಉಪ್ಪಿನಂಗಡಿ : ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯ ನೇತೃತ್ವದಲ್ಲಿ ಮಕ್ಕಳಿಗೆ ಭತ್ತ ಬೇಸಾಯದ ಅನುಭವ ನೀಡುವ ಉದ್ದೇಶದಿಂದ, ಭತ್ತ ನಾಟಿ ಕಾರ್ಯಕ್ರಮದ ಜುಲೈ 27 ಶನಿವಾರದಂದು, ಉಪ್ಪಿನಂಗಡಿಯ ಮುಳಿಯದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ಸದಸ್ಯರಾಗಿರುವ ಜಯಪ್ರಸಾದ್ ಕಡಮ್ಮಾಜೆ ಇವರು ಉದ್ಘಾಟಿಸಿದರು. ಅಮೂಲ್ಯ ಗ್ಯಾಸ್ ಏಜೆನ್ಸಿ ಉಪ್ಪಿನಂಗಡಿಯ ಮಾಲಕರಾಗಿರುವ ಮಾಜಿ ಸೈನಿಕ ಚಂದಪ್ಪ ಮೂಲ್ಯ ಇವರು ಮಕ್ಕಳಿಗೆ ಭತ್ತ ಬೇಸಾಯದ ಅನಿವಾರ್ಯತೆಯ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಿಲ್ ಅಣಾವು ವಹಿಸಿದ್ದರು, ಕಾರ್ಯಕ್ರಮದಲ್ಲಿ ‌ ಮುಳಿಯ ಮನೆಯ ಹಿರಿಯರಾದ ಶ್ರೀಮತಿ ಕಲಾವತಿ ಹೆಗ್ಡೆ, ಶಾಲೆಯ ಸಂಚಾಲಕರಾದ ಯು ಜಿ ರಾಧ, ಉಪಾಧ್ಯಕ್ಷರಾದ ಶ್ರೀಮತಿ ಅನುರಾಧ ಆರ್ ಶೆಟ್ಟಿ, ಸದಸ್ಯರಾದ ಶ್ರೀ ಗುಣಕರ ಅಗ್ನಾಡಿ, ಜಯಂತ್ ಪೊರೋಳಿ, ಪೋಷಕ ಸಂಘದ ಅಧ್ಯಕ್ಷರಾದ ಶ್ರೀ ಉದಯ ಅತ್ರಮಜಲು, ಮಾತೃಭಾರತಿಯ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾಪ್ರಭಾ, ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಎಚ್ ಕೆ ಪ್ರಕಾಶ್, ಶ್ರೀ ಸುಂದರ ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ವಿಮಲ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ದೈವ ನರ್ತಕರಾದ ಶ್ರೀ ಕೂಸಪ್ಪ ಮಿತ್ತಿಲ, ಇಳಂತಿಲ, ಭತ್ತ ಕೃಷಿಕ ಚಿದಾನಂದ ಸಾಲ್ಯಾನ್ ಮತ್ತು ಶಾಲೆಗೆ ಭತ್ತ ಬೇಸಾಯ ಮಾಡಲು ತಮ್ಮ ಗದ್ದೆ ನೀಡಿ ಸಹಕರಿಸಿದ ಮುಳಿಯ ಮನೆಯ ಹಿರಿಯರಾದ ಕಲಾವತಿ ಹೆಗ್ಡೆ ಇವರನ್ನು ಗೌರವಿಸಲಾಯಿತು.

ಗದ್ದೆಗೆ ಅತಿಥಿವರ್ಯರು ಹಾಲೆರೆದು, ನೇಜಿ ನೆಡುವ ಕೆಲಸಕ್ಕೆ ಚಾಲನೆ ನೀಡಿದರು.‌‌ ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕೆಸರುಗದ್ದೆಯ ಓಟ, ಹಗ್ಗಜಗ್ಗಾಟ, ಕಂಬಳ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳು ಮತ್ತು ಕಾಲೇಜು ವಿಭಾಗದ ವಿದ್ಯಾರ್ಥಿಗಳು ಆಗಮಿಸಿ, ಗದ್ದೆಯಲ್ಲಿ ಆಟವಾಡಿ ನೇಜಿನೆಟ್ಟು ಭತ್ತ ಬೇಸಾಯದ ಬಗ್ಗೆ ಅರಿತುಕೊಂಡರು. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕು| ಅನ್ವಿ ಸ್ವಾಗತಿಸಿ, ಕು| ಶಿವಾನಿ ಮತ್ತು ಕು| ಭವಿಷ್ಯ ಕಾರ್ಯಕ್ರಮ ನಿರೂಪಿಸಿದರು, ಕು| ಯಶ್ವಿತ ವಂದಿಸಿದರು.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 6 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 4 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ