ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 15 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ