ವನವಾಸಿ ಕಲ್ಯಾಣ ಆಶ್ರಮದ ಶಾಂತಾರಾಂ ಸಿದ್ಧಿ ವಿಧಾನಪರಿಷತ್ ಗೆ ಆಯ್ಕೆ

ಬೆಂಗಳೂರು: ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಂ ಸಿದ್ಧಿ ಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ .

ಇವರು ಸಿದ್ಧಿ ಸಮುದಾಯದ ಮೊದಲ ಪದವೀಧರರು . 7ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ . ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು.

ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಂ ಸಿದ್ಧಿ ಈ ಹಿಂದೆ ಪಶ್ಛಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು.
ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದರು.

ಆಫ್ರಿಕಾದ ಜಾಂಬೇಶೀಯಾ ಎಂಬ ಪ್ರದೇಶದ ಸಿಧಾಮೋ ಎಂಬ ಸಮುದಾಯದ ಜನರನ್ನು ಬ್ರಿಟಿಷರು ಕೂಲಿ ಆಳುಗಳನ್ನಾಗಿ ಭಾರತಕ್ಕೆ ಕರೆತಂದು ಬ್ರಿಟೀಷರು ವಾಪಾಸ್ ಹೋದಾಗ ಇವರು ಹೊಟ್ಟೆ ಪಾಡಿಗೆ ಗೋವಾದ ಅಡವಿಯಿಂದ ಉತ್ತರಕನ್ನಡ ಜಿಲ್ಲೆಗೆ ಬಂದು ಇರುವವರೇ ಈ ಸಿದ್ಧಿ ಸಮುದಾಯದವರು.

ಪಶ್ಚಿಮ ಘಟ್ಟದ ಉತ್ತರ ಕನ್ನಡ ಜಿಲ್ಲೆಯ ದಟ್ಟ ಅಡವಿಯ ಒಳಗಿಂದ ಅಗೋಚರವಾಗಿ ಹೊರ ಬಂದ ವನ ನಿನಾದದಲ್ಲಿ ಒಂದು ಕೂಗು ಇತ್ತು, ವೇದನೆಯ ಆಚೆಯ ಸಾವಿರದ ನೋವು ಇದ್ದೇ ಇತ್ತು. ನಮ್ಮ ಹಂದರವನು ಕಾಪಾಡಿ ಎಂದು ಮರ, ಗಿಡಗಳು ಹಕ್ಕಿಗಳ ಮೂಲಕ ಆಕಾಶಕ್ಕೆ ಮತ್ತು ನಮ್ಮ ಬದುಕನ್ನು ಉಳಿಸಿ ಎಂದು ಎಲೆಗಳ ಮೂಲಕ ನೆಲಕ್ಕೆ ಸಂದೇಶಗಳು ರವಾನೆ ಆಗುತ್ತಲೇ ಇದ್ದವು. ಅಡವಿ ಹಕ್ಕಿಗಳು ಹಣ್ಣು ಕುಕ್ಕಿದವು, ಮಣ್ಣಿನ ಒಳಗಿಂದ ಬೀಜಗಳು ಮೊಳಕೆ ಬಂದು ಚಿಗುರಿದವು. ಕೂಗಿಗೆ ಒಂದು ರಾಗ ಬದ್ಧ ಪಥ ಇದ್ದರೂ ಎಳೆದೊಯ್ದ ದಡ ಸೇರಿಸುವ ರಥ ಇರಲಿಲ್ಲ.
ಪಶ್ಚಿಮ ಘಟ್ಟದ ಯಲ್ಲಾಪುರದ ಸಿದ್ಧಿ ಬುಡಕಟ್ಟು ಸಮುದಾಯದ ಶಾಂತಾರಾಮ್ ಸಿದ್ಧಿ ಯವರಿಗೆ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಆಗಿರುವುದು ನಿಜಕ್ಕೂ ಸಂತಸದ ವಿಷಯ. ಸಿದ್ಧಿ ಸಮುದಾಯದ ಒಬ್ಬ ವ್ಯಕ್ತಿಗೆ ರಾಜಕೀಯ ಸ್ಥಾನ ಮಾನ ಲಭಿಸಿರುವುದು ಇದು ಪ್ರಪ್ರಥಮ ಬಾರಿಗೆ. ಕತ್ತಲೆಯ ಬದುಕಿನಲ್ಲಿ ಕತ್ತು ಬಗ್ಗಿಸಿಕೊಂಡು ಅಳುಕಿನಲ್ಲಿ ಇದ್ದ ಸಿದ್ಧಿ ಸಮುದಾಯಕ್ಕೆ ಇದು ಒಂದು ಬೆಳಕು ಆಗಬಹುದು ಎಂದು ನಮ್ಮೆಲ್ಲರ ನಿರೀಕ್ಷೆ.

ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ)

Spread the love
  • Related Posts

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    You Missed

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 30 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 217 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 55 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 53 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 50 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ