ವನವಾಸಿ ಕಲ್ಯಾಣ ಆಶ್ರಮದ ಶಾಂತಾರಾಂ ಸಿದ್ಧಿ ವಿಧಾನಪರಿಷತ್ ಗೆ ಆಯ್ಕೆ

ಬೆಂಗಳೂರು: ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಂ ಸಿದ್ಧಿ ಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ .

ಇವರು ಸಿದ್ಧಿ ಸಮುದಾಯದ ಮೊದಲ ಪದವೀಧರರು . 7ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ . ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು.

ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಂ ಸಿದ್ಧಿ ಈ ಹಿಂದೆ ಪಶ್ಛಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು.
ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದರು.

ಆಫ್ರಿಕಾದ ಜಾಂಬೇಶೀಯಾ ಎಂಬ ಪ್ರದೇಶದ ಸಿಧಾಮೋ ಎಂಬ ಸಮುದಾಯದ ಜನರನ್ನು ಬ್ರಿಟಿಷರು ಕೂಲಿ ಆಳುಗಳನ್ನಾಗಿ ಭಾರತಕ್ಕೆ ಕರೆತಂದು ಬ್ರಿಟೀಷರು ವಾಪಾಸ್ ಹೋದಾಗ ಇವರು ಹೊಟ್ಟೆ ಪಾಡಿಗೆ ಗೋವಾದ ಅಡವಿಯಿಂದ ಉತ್ತರಕನ್ನಡ ಜಿಲ್ಲೆಗೆ ಬಂದು ಇರುವವರೇ ಈ ಸಿದ್ಧಿ ಸಮುದಾಯದವರು.

ಪಶ್ಚಿಮ ಘಟ್ಟದ ಉತ್ತರ ಕನ್ನಡ ಜಿಲ್ಲೆಯ ದಟ್ಟ ಅಡವಿಯ ಒಳಗಿಂದ ಅಗೋಚರವಾಗಿ ಹೊರ ಬಂದ ವನ ನಿನಾದದಲ್ಲಿ ಒಂದು ಕೂಗು ಇತ್ತು, ವೇದನೆಯ ಆಚೆಯ ಸಾವಿರದ ನೋವು ಇದ್ದೇ ಇತ್ತು. ನಮ್ಮ ಹಂದರವನು ಕಾಪಾಡಿ ಎಂದು ಮರ, ಗಿಡಗಳು ಹಕ್ಕಿಗಳ ಮೂಲಕ ಆಕಾಶಕ್ಕೆ ಮತ್ತು ನಮ್ಮ ಬದುಕನ್ನು ಉಳಿಸಿ ಎಂದು ಎಲೆಗಳ ಮೂಲಕ ನೆಲಕ್ಕೆ ಸಂದೇಶಗಳು ರವಾನೆ ಆಗುತ್ತಲೇ ಇದ್ದವು. ಅಡವಿ ಹಕ್ಕಿಗಳು ಹಣ್ಣು ಕುಕ್ಕಿದವು, ಮಣ್ಣಿನ ಒಳಗಿಂದ ಬೀಜಗಳು ಮೊಳಕೆ ಬಂದು ಚಿಗುರಿದವು. ಕೂಗಿಗೆ ಒಂದು ರಾಗ ಬದ್ಧ ಪಥ ಇದ್ದರೂ ಎಳೆದೊಯ್ದ ದಡ ಸೇರಿಸುವ ರಥ ಇರಲಿಲ್ಲ.
ಪಶ್ಚಿಮ ಘಟ್ಟದ ಯಲ್ಲಾಪುರದ ಸಿದ್ಧಿ ಬುಡಕಟ್ಟು ಸಮುದಾಯದ ಶಾಂತಾರಾಮ್ ಸಿದ್ಧಿ ಯವರಿಗೆ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಆಗಿರುವುದು ನಿಜಕ್ಕೂ ಸಂತಸದ ವಿಷಯ. ಸಿದ್ಧಿ ಸಮುದಾಯದ ಒಬ್ಬ ವ್ಯಕ್ತಿಗೆ ರಾಜಕೀಯ ಸ್ಥಾನ ಮಾನ ಲಭಿಸಿರುವುದು ಇದು ಪ್ರಪ್ರಥಮ ಬಾರಿಗೆ. ಕತ್ತಲೆಯ ಬದುಕಿನಲ್ಲಿ ಕತ್ತು ಬಗ್ಗಿಸಿಕೊಂಡು ಅಳುಕಿನಲ್ಲಿ ಇದ್ದ ಸಿದ್ಧಿ ಸಮುದಾಯಕ್ಕೆ ಇದು ಒಂದು ಬೆಳಕು ಆಗಬಹುದು ಎಂದು ನಮ್ಮೆಲ್ಲರ ನಿರೀಕ್ಷೆ.

ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ)

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ