ವನವಾಸಿ ಕಲ್ಯಾಣ ಆಶ್ರಮದ ಶಾಂತಾರಾಂ ಸಿದ್ಧಿ ವಿಧಾನಪರಿಷತ್ ಗೆ ಆಯ್ಕೆ

ಬೆಂಗಳೂರು: ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಂ ಸಿದ್ಧಿ ಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ .

ಇವರು ಸಿದ್ಧಿ ಸಮುದಾಯದ ಮೊದಲ ಪದವೀಧರರು . 7ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ . ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು.

ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಂ ಸಿದ್ಧಿ ಈ ಹಿಂದೆ ಪಶ್ಛಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು.
ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದರು.

ಆಫ್ರಿಕಾದ ಜಾಂಬೇಶೀಯಾ ಎಂಬ ಪ್ರದೇಶದ ಸಿಧಾಮೋ ಎಂಬ ಸಮುದಾಯದ ಜನರನ್ನು ಬ್ರಿಟಿಷರು ಕೂಲಿ ಆಳುಗಳನ್ನಾಗಿ ಭಾರತಕ್ಕೆ ಕರೆತಂದು ಬ್ರಿಟೀಷರು ವಾಪಾಸ್ ಹೋದಾಗ ಇವರು ಹೊಟ್ಟೆ ಪಾಡಿಗೆ ಗೋವಾದ ಅಡವಿಯಿಂದ ಉತ್ತರಕನ್ನಡ ಜಿಲ್ಲೆಗೆ ಬಂದು ಇರುವವರೇ ಈ ಸಿದ್ಧಿ ಸಮುದಾಯದವರು.

ಪಶ್ಚಿಮ ಘಟ್ಟದ ಉತ್ತರ ಕನ್ನಡ ಜಿಲ್ಲೆಯ ದಟ್ಟ ಅಡವಿಯ ಒಳಗಿಂದ ಅಗೋಚರವಾಗಿ ಹೊರ ಬಂದ ವನ ನಿನಾದದಲ್ಲಿ ಒಂದು ಕೂಗು ಇತ್ತು, ವೇದನೆಯ ಆಚೆಯ ಸಾವಿರದ ನೋವು ಇದ್ದೇ ಇತ್ತು. ನಮ್ಮ ಹಂದರವನು ಕಾಪಾಡಿ ಎಂದು ಮರ, ಗಿಡಗಳು ಹಕ್ಕಿಗಳ ಮೂಲಕ ಆಕಾಶಕ್ಕೆ ಮತ್ತು ನಮ್ಮ ಬದುಕನ್ನು ಉಳಿಸಿ ಎಂದು ಎಲೆಗಳ ಮೂಲಕ ನೆಲಕ್ಕೆ ಸಂದೇಶಗಳು ರವಾನೆ ಆಗುತ್ತಲೇ ಇದ್ದವು. ಅಡವಿ ಹಕ್ಕಿಗಳು ಹಣ್ಣು ಕುಕ್ಕಿದವು, ಮಣ್ಣಿನ ಒಳಗಿಂದ ಬೀಜಗಳು ಮೊಳಕೆ ಬಂದು ಚಿಗುರಿದವು. ಕೂಗಿಗೆ ಒಂದು ರಾಗ ಬದ್ಧ ಪಥ ಇದ್ದರೂ ಎಳೆದೊಯ್ದ ದಡ ಸೇರಿಸುವ ರಥ ಇರಲಿಲ್ಲ.
ಪಶ್ಚಿಮ ಘಟ್ಟದ ಯಲ್ಲಾಪುರದ ಸಿದ್ಧಿ ಬುಡಕಟ್ಟು ಸಮುದಾಯದ ಶಾಂತಾರಾಮ್ ಸಿದ್ಧಿ ಯವರಿಗೆ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಆಗಿರುವುದು ನಿಜಕ್ಕೂ ಸಂತಸದ ವಿಷಯ. ಸಿದ್ಧಿ ಸಮುದಾಯದ ಒಬ್ಬ ವ್ಯಕ್ತಿಗೆ ರಾಜಕೀಯ ಸ್ಥಾನ ಮಾನ ಲಭಿಸಿರುವುದು ಇದು ಪ್ರಪ್ರಥಮ ಬಾರಿಗೆ. ಕತ್ತಲೆಯ ಬದುಕಿನಲ್ಲಿ ಕತ್ತು ಬಗ್ಗಿಸಿಕೊಂಡು ಅಳುಕಿನಲ್ಲಿ ಇದ್ದ ಸಿದ್ಧಿ ಸಮುದಾಯಕ್ಕೆ ಇದು ಒಂದು ಬೆಳಕು ಆಗಬಹುದು ಎಂದು ನಮ್ಮೆಲ್ಲರ ನಿರೀಕ್ಷೆ.

ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ)

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ