ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಯದುಪತಿ ಗೌಡರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ ) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನ ಹಳೇಕೋಟೆ ಬೆಳ್ತಂಗಡಿಯಲ್ಲಿ ನಡೆಯಿತು.

ನಿವೃತ್ತ ಪ್ರಾಂಶುಪಾಲರಿಗೆ ಹಾಗೂ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಯುವ ವೇದಿಕೆ ಅಧ್ಯಕ್ಷ ಚಂದ್ರ ಕಾಂತ ನಿಡ್ಡಾಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಅವರು ನಡೆದು ಬಂದ ಹಾದಿಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಬಗ್ಗೆ ತಮ್ಮ ಮಾತುಗಳಲ್ಲಿ ಪ್ರಸ್ತುತಪಡಿಸಿದರು. ಪ್ರಾಂಶುಪಾಲರ ಸಂಘದ ವತಿಯಿಂದ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪಡೆದ ವಾಣಿ ಕಾಲೇಜಿನ ಮಹಾಬಲ ಗೌಡ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಶಸ್ತಿ ಪಡೆದ ಕೊಯ್ಯೂರಿನ ವಿಜಯ ಕುಮಾರ್ ಹಾಗೂ ಉಜಿರೆಯ ಜಯ ಕೆ ಇವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ಇವರು ವಹಿಸಿ ನಮ್ಮ ಸಮಾಜದ ಸಾಧನೆ ಮಾಡಿದ ವ್ಯಕ್ತಿಗಳನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ. ಇಂತಹ ಕಾರ್ಯಕ್ರಮ ನಮ್ಮ ಸಮಾಜದ ಇನ್ನಷ್ಟು ಬಂಧುಗಳು ಸಾಧನೆ ಮಾಡಲು ಸ್ಫೂರ್ತಿಯಾಗಬೇಕು ಎಂಬ ಉದ್ದೇಶದಿಂದ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದು ತಮ್ಮ ಅಧ್ಯಕ್ಷೀಯ ಭಾಷಣ ದಲ್ಲಿ ನುಡಿದರು.ಮಂದಿನ ದಿನಗಳಲ್ಲಿ ನಮ್ಮ ಸಮಾಜದ ಬಂಧುಗಳಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವವರಿದ್ದೇವೆ ಎಂದು ತಮ್ಮ ಅಧ್ಯಕ್ಷ ನುಡಿಗಳನ್ನಾಡಿದರು.ವೇದಿಕೆಯಲ್ಲಿ ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷರಾದ ಗೀತಾ ರಾಮಣ್ಣ ಗೌಡ ಕೊಯ್ಯೂರು ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಸೀತಾರಾಮ ಬೆಳಾಲು, ಪ್ರಗತಿ ಸ್ವ-ಸಹಾಯ ಸಂಘ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷರಾದ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು.ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇದರ ಸಂಚಾಲಕರಾದ ಸೀತಾರಾಮ ಗೌಡ ಬೆಳಾಲು ಕಾರ್ಯಕ್ರಮದ ಸ್ವಾಗತ ಭಾಷಣವನ್ನು ನೆರವೇರಿಸಿಕೊಟ್ಟರು. ಪ್ರಗತಿ ಸ್ವ- ಸಹಾಯ ಸಂಘ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷರಾದ ಮೋಹನ ಗೌಡ ಕೊಯ್ಯೂರು ಇವರು ಪ್ರಾಸ್ತಾವಿಕವಾಗ ಮಾತನಾಡಿದರು. ಛಾಯಾಗ್ರಾಹಕರಾಗಿ ಯುವ ವೇದಿಕೆಯ ಉಪಾಧ್ಯಕ್ಷರಾದ ನಿತಿನ್ ಕಲ್ಮಂಜ ಸಹಕರಿಸಿದರು.ಈ ಸಂಧರ್ಭ ಯುವ ವೇದಿಕೆಯ ಸಲಹೆಗಾರ ಮೋಹನ ಗೌಡ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕೋಶಾಧಿಕಾರಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿ ತೀಕ್ಷಿತ್ ದಿಡುಪೆ, ಉಪಾಧ್ಯಕ್ಷ ನಿತಿನ್ ಕಲ್ಮಂಜ, ಕಾನೂನು ಸಲಹೆಗಾರ ನವೀನ್ ನಿಡ್ಲೆ, ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಯಶವಂತ ಡೆಚ್ಚಾರು, ಭರತ್ ಪುದುವೆಟ್ಟು, ಸತೀಶ್ ಬೆಳಾಲು, ಅಕ್ಷಯ್ ಉಜಿರೆ, ಪ್ರಸಾದ್ ಚಾರ್ಮಾಡಿ, ಮಂಜುನಾಥ ಚಾರ್ಮಾಡಿ, ಸಚಿನ್ ಕನ್ಯಾಡಿ, ಶಿವಪ್ರಸಾದ್ ಕಲ್ಮಂಜ, ನಿತೇಶ್ ಬೆಳ್ತಂಗಡಿ, ಸೀತಾರಾಮ್ ಬೆಳಾಲು, ಧನಂಜಯ್ ಕುಮಾರ್ ಪೆರ್ಲ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾರಾಮಣ್ಣ ಗೌಡ, ಕಾರ್ಯದರ್ಶಿ ಲೀಲಾ ಬೆಳಾಲು, ದಯಾಮಣಿ ಕೊಯ್ಯೂರು, ಮೀನಾಕ್ಷಿ ಮಹಾಬಲ ಗೌಡ ಕುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಧನ್ಯವಾದವನ್ನು ಯುವ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ ನೆರವೇರಿಸಿದರು. ಕಾರ್ಯಕ್ರಮದ ನಿರೂಪಣೆ ಯನ್ನು ಮಹೇಶ್ ಬೆಳಾಲು ನಿರ್ವಹಿಸಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ