“ಜೀವ ಉಳಿಸಲು ನಿಮ್ಮ ನೆರವು ಅಗತ್ಯ“

ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ ತೀವ್ರ ತರದ ಗಾಯಗಳಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದು ಉಜಿರೆಯ SDM ಆಸ್ಪತ್ರೆಯ ತುರ್ತು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ಮಾಡುತ್ತಿದ್ದಾರೆ.
ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ವಸಂತ ಗೌಡ ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕ (ICU)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಗೆ ಅಪಾರ ಪ್ರಮಾಣದ ಹಣದ ಅಗತ್ಯವಿದೆ. ಕುಟುಂಬದ ಏಕೈಕ ಆಧಾರಸ್ತಂಭವಾಗಿರುವ ವಸಂತ ಗೌಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕುಟುಂಬಸ್ಥರು ಹಾಗೂ ಸ್ನೇಹಿತರು ಸಾರ್ವಜನಿಕರಲ್ಲಿ ಮಾನವೀಯ ನೆರವಿಗಾಗಿ ಮನವಿ ಮಾಡಿದ್ದಾರೆ.
ಚಿಕಿತ್ಸೆಯ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾಮಾನ್ಯ ಕುಟುಂಬಕ್ಕೆ ಈ ಭಾರವನ್ನು ಭರಿಸುವುದು ಕಷ್ಟಕರವಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಮಾಜದ ದಾನಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಆರ್ಥಿಕ ನೆರವನ್ನು ನೀಡುವ ಮೂಲಕ ಜೀವ ಉಳಿಸುವ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಕುಟುಂಬ ಸದಸ್ಯರು ವಿನಂತಿಸಿದ್ದಾರೆ.
“ಸಣ್ಣದಾದರೂ ನಿಮ್ಮ ಪ್ರತಿಯೊಂದು ನೆರವು ಒಂದು ಜೀವ ಉಳಿಸುವ ಆಶಾಕಿರಣವಾಗಬಹುದು”

ಹೆಚ್ಚಿನ ಮಾಹಿತಿಗಾಗಿ ಪೋಸ್ಟರ್ನಲ್ಲಿ ನೀಡಿರುವ QR ಕೋಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಬಳಸಿಕೊಂಡು ನೆರವು ನೀಡಬಹುದಾಗಿದೆ





