ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಬೆಳ್ತಂಗಡಿ: ಬೆಳ್ತಂಗಡಿಯ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ. ಸುಬ್ಬಾಪುರಮಠ ಸೇರಿದಂತೆ ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ ಸುಬ್ಬಾಪುರಮಠ…

    Spread the love

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಮಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಕರಾವಳಿಯ ಜಾನಪದ ಕ್ರೀಡೆ ಕಂಬಳದ ಹಿನ್ನೆಲೆಯುಳ್ಳ ‘ವೀರ ಕಂಬಳ’ ಚಿತ್ರವು ಫೆಬ್ರವರಿ 27, 2026 ರಂದು ತೆರೆಗೆ ಬರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಚಿತ್ರದಲ್ಲಿ…

    Spread the love

    You Missed

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 664 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 261 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 90 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    • By admin
    • February 10, 2026
    • 40 views
    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 78 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 52 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ