ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 12ನೇ ತರಗತಿಯ…

    Spread the love

    You Missed

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 2 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 3 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 4 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 7 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 10 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 11 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ