ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.11 ವರ್ಷದ ನಿಷ್ಕ್ ಅವರು ಏಪ್ರಿಲ್…

    Spread the love

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಉಜಿರೆ: ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ 2026 ಅಂಗವಾಗಿ ಆಯೋಜಿಸಲಾದ ರಾಷ್ಟ್ರ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಕರ್ನಾಟಕದ ಶೈಲೇಶ್ ಉಜಿರೆ ಅವರು ತೃತೀಯ ಬಹುಮಾನವನ್ನು ಗಳಿಸಿ ಗಮನ ಸೆಳೆದಿದ್ದಾರೆ. “ಯುದ್ಧದ ಕಾಲದಲ್ಲಿ ವಿದೇಶ ಪ್ರವಾಸವನ್ನು ತೊರೆದು, ಶಾಂತಿ ಮತ್ತು ಹಸಿರಿನಿಂದ ಕೂಡಿದ ಬಸ್ತರ್…

    Spread the love

    You Missed

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • May 5, 2026
    • 36 views
    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    • By admin
    • May 5, 2026
    • 16 views
    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 324 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 56 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 60 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 31 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ