ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಚಾರ್ಮಾಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ.ಮೂಡಿಗೆರೆ ಅರಣ್ಯವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ…

    Spread the love

    You Missed

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 19 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 45 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 97 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 42 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 194 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 251 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್