ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    You Missed

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 2 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 13 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 25 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 13 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 17 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 14 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ