ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊

    ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು…

    Spread the love

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.…

    Spread the love

    You Missed

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊

    • By admin
    • October 31, 2025
    • 33 views
    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    • By admin
    • October 29, 2025
    • 52 views
    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    • By admin
    • October 29, 2025
    • 80 views
    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • October 25, 2025
    • 29 views
    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    • By admin
    • October 25, 2025
    • 20 views
    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    • By admin
    • October 25, 2025
    • 22 views
    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ