ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    ಬೆಳ್ತಂಗಡಿ: ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭವಾದ ಬಳಂಜ ಶಿಕ್ಷಣ ಟ್ರಸ್ಟ್ ರಿ. ಬಳಂಜ ಇದರ ಅಧ್ಯಕ್ಷರಾಗಿ ಪತ್ರಕರ್ತ ಮನೋಹರ್ ಬಳಂಜ ಪುನರಾಯ್ಕೆಗೊಂಡಿದ್ದಾರೆ.ಟ್ರಸ್ಟ್‌ನ ಸಭೆಯು ಟ್ರಸ್ಟ್‌ನ ಅಧ್ಯಕ್ಷ ಮನೋಹರ್ ಬಳಂಜ…

    Spread the love

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿಯಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಇರಾನ್ ಇದೀಗ ಯುದ್ಧ ಅಂತ್ಯಗೊಳಿಸಲು ಸನ್ನದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಶಾಂತಿ ಮಾತುಕತೆಗಾಗಿ ಇರಾನ್ ಯುರೋಪಿಯನ್ ಯೂನಿಯನ್ ನೆರವಿಗೆ ಮೊರೆಹೋಗಿರುವುದು ಜಾಗತಿಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇರಾನ್ ಅಧಿಕಾರಿಗಳು ಯುದ್ಧ…

    Spread the love

    You Missed

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 30 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 38 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    • By admin
    • April 1, 2026
    • 28 views
    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 262 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    • By admin
    • March 31, 2026
    • 52 views
    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

    • By admin
    • March 31, 2026
    • 66 views
    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್