ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಾ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಾ ಮುಂದೆ ಸಾಗುತ್ತಿರುವ ಸಂಸ್ಥೆಯು ಅನೇಕ ಬಗೆಯ ಸೇವೆಗಳನ್ನು ನೀಡುತ್ತಾ ಬರುತ್ತಿದ್ದು, ಇತ್ತೀಚಿಗೆ ರಾಜ್ಯದಾಧ್ಯಂತ ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು ತಲಾ 750 ರಿಂದ ಒಂದು ಸಾವಿರ ರೂಪಾಯಿಯವರಿಗೆ ಮಾಸಾಶನ ನೀಡಲಾಗುತ್ತದೆ.

ಮಾಸಾಶನದೊಂದಿಗೆ ಈ ಬಾರಿ ಪಾತ್ರೆ, ತಲೆ ದಿಂಬು, ಹೊದಿಕೆ ಸೇರಿದಂತೆ ಮೂಲಭೂತ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಈ ವಾತ್ಸಲ್ಯ ಕಿಟ್ ಮುಖಾಂತರ ರೋಗಿಗಳು , ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟ ಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದು:ಖವನ್ನು ನಿವಾರಿಸಿ ಶಾಂತಿ , ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯಾದ್ಯಾಂತ 255 ಕುಟುಂಬಗಳಿಗೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ವಿಭಾಗದಲ್ಲಿ 1336 ರಾಜ್ಯಾದಾಧ್ಯಂತ 11287 ವಾತ್ಸಲ್ಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ವಾತ್ಸಲ್ಯ ಕಿಟ್ಗಳನು ವಿತರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮುಂದುವರೆದ ಭಾಗವಾಗಿ ವಾತ್ಸಲ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭ ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ , ಯುವ ಬ್ರಿಗೇಡ್ ಸಂಚಾಲಕ ಚನ್ನು ಚಿಕ್ಕಮಠ , ನಾಗರಾಜ್, ವೀರೇಶ್ , ಗ್ರಾಮ ಪಂಚಾಯತ್ ಸದಸ್ಯ ಮಹಿಬೊಬ್ ಅಲಿ, ಅಮರಗುಂಡಪ್ಪ ಮೇಲ್ವಿಚಾರಕ ರಾಮು, ಸೇವಾಪ್ರತಿನಿಧಿಗಳು ಮುಂತಾದವರು ಉಪಸ್ಧಿತರಿದ್ದರು.

Spread the love
  • Related Posts

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    You Missed

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 2 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 3 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 9 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 9 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ