ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಹಾಗೂ ಕ್ಷೇಮವನದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಹೇಳಿದರು.

ಅವರು ತಾಲೂಕಿನ ಬಾಳುಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ ಗ್ರಾಮದ ವೃದ್ಧೆ ಲಕ್ಷ್ಮಮ್ಮ ರವರಿಗೆ ಶುಕ್ರವಾರ ವಾತ್ಸಲ್ಯ ಯೋಜನೆಯಡಿ ನೂತನ ವಾತ್ಸಲ್ಯ ಸೂರನ್ನು ಹಸ್ತಾಂತರಿಸಿ ಶುಭಹಾರೈಸಿದರು.

ಸೂರಿಲ್ಲದೆ ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿ ಬದುಕುತ್ತಿರುವ ನಿರ್ಗತಿಕರನ್ನು ಗುರುತಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮನೆಗಳನ್ನು ನಿರ್ಮಿಸಿ ವಸತಿ ಕಲ್ಪಿಸಲಾಗುತ್ತಿದೆ. ಇದರೊಂದಿಗೆ ಪ್ರತಿ ತಿಂಗಳು 1,000ದಿಂದ 3000ದವರೆಗೆ ಮಾಸಾಶನ ಹಾಗೂ ದಿನನಿತ್ಯದ ಬಳಕೆ ವಸ್ತುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆ ವಸ್ತುಗಳನ್ನು ಒಳಗೊಂಡ ವಾತ್ಸಲ್ಯ ಕಿಟ್ ಬಡವರಿಗೆ ಆಶಾಕಿರಣವಾಗಿದೆ ಎಂದು ಹೇಳಿದರು.

ಇಲ್ಲಿವರೆಗೆ 684 ಮನೆಗಳನ್ನು ಹಸ್ತಾಂತರಿಸಲಾಗಿದ್ದು, ಇನ್ನೂ ನೂರಾರು ಮನೆಗಳು ನಿರ್ಮಾಣ ಹಂತದಲ್ಲಿವೆ. 666ನೇ ವಾತ್ಸಲ್ಯ ಮನೆ ಹಸ್ತಾಂತರವನ್ನು ಶೃಂಗೇರಿ ಪೀಠದ ಶ್ರೀಗಳು ತಮ್ಮ ಅಮೃತ ಹಸ್ತದಿಂದ ನೆರವೇರಿಸಿರುವುದು ಯೋಜನೆಗೆ ವಿಶೇಷ ಗರಿಮೆಯಾಗಿದೆ ಎಂದು ತಿಳಿಸಿದರು.

ವಾತ್ಸಲ್ಯ ಮನೆ ನಿರ್ಮಾಣದಿಂದ ನಿರ್ಗತಿಕ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ. ಅದಕ್ಕಿಂತ ದೊಡ್ಡ ಆತ್ಮತೃಪ್ತಿ ಮತ್ತೊಂದಿಲ್ಲ. ಕೊನೆಗಾಲದಲ್ಲಿ ಯಾರ ಮೇಲೂ ಅವಲಂಬಿತರಾಗದೇ ಸ್ವಾಭಿಮಾನದಿಂದ ಬದುಕುವ ಆಶಯವನ್ನು ಈ ಯೋಜನೆ ಸಾಕಾರಗೊಳಿಸುತ್ತಿದೆ ಎಂದು ಶ್ರದ್ದಾ ಅಮಿತ್ ಹೇಳಿದರು.

ಶಾಸಕ ಸಿಮೆಂಟ್ ಮಂಜು ಅವರ ಧರ್ಮಪತ್ನಿ ಪ್ರತಿಭಾ ಮಂಜುನಾಥ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಬಡ ಹಾಗೂ ನಿರ್ಗತಿಕ ಮಹಿಳೆಯರ ಬದುಕಿನಲ್ಲಿ ಆತ್ಮಸ್ಥೆರ್ಯ ತುಂಬುವ ಮಹತ್ವದ ಕೆಲಸ ಮಾಡುತ್ತಿದೆ. ಅನೇಕ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಸಮಾಜದ ಬಗ್ಗೆ ಅಪಾರ ಕಾಳಜಿ ವಹಿಸುತ್ತಿರುವ ಸಂಸ್ಥೆಯ ಕಾರ್ಯಗಳು ಪ್ರೇರಣಾದಾಯಕ ಹಾಗೂ ಮಾದರಿಯಾಗಿದೆ. ಈ ಕಾರ್ಯಕ್ಕಾಗಿ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಪ್ರಾದೇಶಿಕ ನಿರ್ದೇಶಕರಾದ ಜಯಂತ್ ಪೂಜಾರಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಡಾ.ನವೀನ್ ಚಂದ್ರ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಗಿರೀಶ್ ಮಂಜುನಾಥ್, ಉಮಾನಾಥ ಸುವರ್ಣ, ಗ್ರಾ.ಪಂ.ಅಧ್ಯಕ್ಷೆ ಲತಾ, ನೇತ್ರಾವತಿ ಮಂಜುನಾಥ್, ಬಬಿತಾ ವಿಶ್ವನಾಥ್, ಗ್ರಾ.ಪಂ.ಸದಸ್ಯ ರಾಜೇಶ್, ತಾಲೂಕು ಯೋಜನಾಧಿಕಾರಿ ರಾಜೇಶ.ಎಂ, ಜ್ಞಾನ ವಿಕಾಸ ಯೋಜನಾಧಿಕಾರಿ ಮೂಕಾಂಬಿಕಾ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರುಗಳಾದ ಜ್ಯೋತಿ, ಮಂಜುಳಾ, ಚಿರಾಂತ್, ಶೌರ್ಯ ಘಟಕದ ಮಧುವರನ್, ಮಂಜುನಾಥ್, ಪ್ರಸನ್ನ, ಪ್ರಕಾಶ್, ರವಿ, ಸೇವಾ ಪ್ರತಿನಿಧಿಗಳಾದ ನಳಿನಿ,ಕೋಮಲ, ಪುನಿತ್, ರಮ್ಯ, ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಊರಿನ ಗಣ್ಯರು ಉಪಸ್ಥಿತರಿದ್ದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 21 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 6 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ