ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಹಾಗೂ ಕ್ಷೇಮವನದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಹೇಳಿದರು.

ಅವರು ತಾಲೂಕಿನ ಬಾಳುಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ ಗ್ರಾಮದ ವೃದ್ಧೆ ಲಕ್ಷ್ಮಮ್ಮ ರವರಿಗೆ ಶುಕ್ರವಾರ ವಾತ್ಸಲ್ಯ ಯೋಜನೆಯಡಿ ನೂತನ ವಾತ್ಸಲ್ಯ ಸೂರನ್ನು ಹಸ್ತಾಂತರಿಸಿ ಶುಭಹಾರೈಸಿದರು.

ಸೂರಿಲ್ಲದೆ ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿ ಬದುಕುತ್ತಿರುವ ನಿರ್ಗತಿಕರನ್ನು ಗುರುತಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮನೆಗಳನ್ನು ನಿರ್ಮಿಸಿ ವಸತಿ ಕಲ್ಪಿಸಲಾಗುತ್ತಿದೆ. ಇದರೊಂದಿಗೆ ಪ್ರತಿ ತಿಂಗಳು 1,000ದಿಂದ 3000ದವರೆಗೆ ಮಾಸಾಶನ ಹಾಗೂ ದಿನನಿತ್ಯದ ಬಳಕೆ ವಸ್ತುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆ ವಸ್ತುಗಳನ್ನು ಒಳಗೊಂಡ ವಾತ್ಸಲ್ಯ ಕಿಟ್ ಬಡವರಿಗೆ ಆಶಾಕಿರಣವಾಗಿದೆ ಎಂದು ಹೇಳಿದರು.

ಇಲ್ಲಿವರೆಗೆ 684 ಮನೆಗಳನ್ನು ಹಸ್ತಾಂತರಿಸಲಾಗಿದ್ದು, ಇನ್ನೂ ನೂರಾರು ಮನೆಗಳು ನಿರ್ಮಾಣ ಹಂತದಲ್ಲಿವೆ. 666ನೇ ವಾತ್ಸಲ್ಯ ಮನೆ ಹಸ್ತಾಂತರವನ್ನು ಶೃಂಗೇರಿ ಪೀಠದ ಶ್ರೀಗಳು ತಮ್ಮ ಅಮೃತ ಹಸ್ತದಿಂದ ನೆರವೇರಿಸಿರುವುದು ಯೋಜನೆಗೆ ವಿಶೇಷ ಗರಿಮೆಯಾಗಿದೆ ಎಂದು ತಿಳಿಸಿದರು.

ವಾತ್ಸಲ್ಯ ಮನೆ ನಿರ್ಮಾಣದಿಂದ ನಿರ್ಗತಿಕ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ. ಅದಕ್ಕಿಂತ ದೊಡ್ಡ ಆತ್ಮತೃಪ್ತಿ ಮತ್ತೊಂದಿಲ್ಲ. ಕೊನೆಗಾಲದಲ್ಲಿ ಯಾರ ಮೇಲೂ ಅವಲಂಬಿತರಾಗದೇ ಸ್ವಾಭಿಮಾನದಿಂದ ಬದುಕುವ ಆಶಯವನ್ನು ಈ ಯೋಜನೆ ಸಾಕಾರಗೊಳಿಸುತ್ತಿದೆ ಎಂದು ಶ್ರದ್ದಾ ಅಮಿತ್ ಹೇಳಿದರು.

ಶಾಸಕ ಸಿಮೆಂಟ್ ಮಂಜು ಅವರ ಧರ್ಮಪತ್ನಿ ಪ್ರತಿಭಾ ಮಂಜುನಾಥ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಬಡ ಹಾಗೂ ನಿರ್ಗತಿಕ ಮಹಿಳೆಯರ ಬದುಕಿನಲ್ಲಿ ಆತ್ಮಸ್ಥೆರ್ಯ ತುಂಬುವ ಮಹತ್ವದ ಕೆಲಸ ಮಾಡುತ್ತಿದೆ. ಅನೇಕ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಸಮಾಜದ ಬಗ್ಗೆ ಅಪಾರ ಕಾಳಜಿ ವಹಿಸುತ್ತಿರುವ ಸಂಸ್ಥೆಯ ಕಾರ್ಯಗಳು ಪ್ರೇರಣಾದಾಯಕ ಹಾಗೂ ಮಾದರಿಯಾಗಿದೆ. ಈ ಕಾರ್ಯಕ್ಕಾಗಿ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಪ್ರಾದೇಶಿಕ ನಿರ್ದೇಶಕರಾದ ಜಯಂತ್ ಪೂಜಾರಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಡಾ.ನವೀನ್ ಚಂದ್ರ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಗಿರೀಶ್ ಮಂಜುನಾಥ್, ಉಮಾನಾಥ ಸುವರ್ಣ, ಗ್ರಾ.ಪಂ.ಅಧ್ಯಕ್ಷೆ ಲತಾ, ನೇತ್ರಾವತಿ ಮಂಜುನಾಥ್, ಬಬಿತಾ ವಿಶ್ವನಾಥ್, ಗ್ರಾ.ಪಂ.ಸದಸ್ಯ ರಾಜೇಶ್, ತಾಲೂಕು ಯೋಜನಾಧಿಕಾರಿ ರಾಜೇಶ.ಎಂ, ಜ್ಞಾನ ವಿಕಾಸ ಯೋಜನಾಧಿಕಾರಿ ಮೂಕಾಂಬಿಕಾ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರುಗಳಾದ ಜ್ಯೋತಿ, ಮಂಜುಳಾ, ಚಿರಾಂತ್, ಶೌರ್ಯ ಘಟಕದ ಮಧುವರನ್, ಮಂಜುನಾಥ್, ಪ್ರಸನ್ನ, ಪ್ರಕಾಶ್, ರವಿ, ಸೇವಾ ಪ್ರತಿನಿಧಿಗಳಾದ ನಳಿನಿ,ಕೋಮಲ, ಪುನಿತ್, ರಮ್ಯ, ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಊರಿನ ಗಣ್ಯರು ಉಪಸ್ಥಿತರಿದ್ದರು.

Spread the love
  • Related Posts

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    You Missed

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 72 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 103 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 43 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 37 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 24 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!