ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

ಮಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಕರಾವಳಿಯ ಜಾನಪದ ಕ್ರೀಡೆ ಕಂಬಳದ ಹಿನ್ನೆಲೆಯುಳ್ಳ ‘ವೀರ ಕಂಬಳ’ ಚಿತ್ರವು ಫೆಬ್ರವರಿ 27, 2026 ರಂದು ತೆರೆಗೆ ಬರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರದೊಂದಿಗೆ ಹಾಗೂ, ಪ್ರಕಾಶ್ ರೈ, ರವಿಶಂಕರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾವು ಸುಮಾರು 700 ವರ್ಷಗಳ ಇತಿಹಾಸ ಮತ್ತು ಎರಡು ಮನೆತನಗಳ ಘರ್ಷಣೆಯನ್ನು ಆಧಾರಿಸಿದೆ.

ಕಂಬಳದ ಕಥಾಹಂದರ ಹೊಂದಿರುವ ಈ ವೀರ ಕಂಬಳ ಕನ್ನಡ, ತುಳು ಭಾಷೆಯ ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಚಿತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷತೆಯಾಗಿದೆ.

ತುಳು ರಂಗಭೂಮಿಯ ಪ್ರಸಿದ್ದ ನಿರ್ದೇಶಕ ವಿಜಯ್ ಕೊಡಿಯಾಲ್ ಬೈಲ್ ಚಿತ್ರಕಥೆ ಮತ್ತು ಸಂಭಾಷಣೆಯ ಮೂಲಕ ಈ ಚಿತ್ರಕ್ಕೆ ಜೊತೆಯಾಗಿದ್ದಾರೆ. ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ನಾಯಕನಾಗಿ ಸವಾಲಿನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪ್ರತಿಯೊಂದು ಸೂಕ್ಷ್ಮ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತುಳುನಾಡಿನ ಪ್ರಾಜ್ಞರ ಮಾರ್ಗದರ್ಶನದಲ್ಲಿ ಯಾವುದೇ ತೊಡಕಿಲ್ಲದಂತೆ ವೀರ ಕಂಬಳವನ್ನು ಅಣಿಗೊಳಿಸಿರುವುದಾಗಿ ರಾಜೇಂದ್ರ ಸಿಂಗ್ ಬಾಬು ಅಭಿಪ್ರಾಯ ಹಂಚಿಕೊಂಡಿದ್ದರು.

ವಿಶೇಷವೆಂದರೆ, ಕಂಬಳದಲ್ಲಿ ಕೋಣಗಳನ್ನು ಓಡಿಸೋದರಲ್ಲಿ ದಾಖಲೆ ಬರೆದಿರುವ ಶ್ರೀನಿವಾಸ್‌ ಗೌಡ ಇಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿದ್ದಾರೆ. ಸ್ವರಾಜ್ ಶೆಟ್ಟಿ ಅವರಿಗೆ ಜೊತೆಯಾಗಿದ್ದಾರೆ. ದುಬೈನಲ್ಲಿಯೂ ಚಿತ್ರೀಕರಣ ನಡೆಸಲಾಗಿದೆ.

ಈ ಚಿತ್ರವನ್ನು ಡಾ. ವಿನಿತಾ ವಿಜಯ್ ಕುಮಾರ್‌ರೆಡ್ಡಿ ಹಾಗೂ ಅರುಣ್ ರೈ ತೊಡಾರ್‌ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್‌ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ದ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ .ಎಸ್‌.ಬಾಬು ಸಂಕಲನ, ಚಂದ್ರಶೇಖರ್‌ಸುವರ್ಣ ಮುಲ್ಕಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Spread the love
  • Related Posts

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

    Spread the love

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    You Missed

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 15 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 41 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 19 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 28 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 50 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 29 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ