ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

ಮಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಕರಾವಳಿಯ ಜಾನಪದ ಕ್ರೀಡೆ ಕಂಬಳದ ಹಿನ್ನೆಲೆಯುಳ್ಳ ‘ವೀರ ಕಂಬಳ’ ಚಿತ್ರವು ಫೆಬ್ರವರಿ 27, 2026 ರಂದು ತೆರೆಗೆ ಬರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರದೊಂದಿಗೆ ಹಾಗೂ, ಪ್ರಕಾಶ್ ರೈ, ರವಿಶಂಕರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾವು ಸುಮಾರು 700 ವರ್ಷಗಳ ಇತಿಹಾಸ ಮತ್ತು ಎರಡು ಮನೆತನಗಳ ಘರ್ಷಣೆಯನ್ನು ಆಧಾರಿಸಿದೆ.

ಕಂಬಳದ ಕಥಾಹಂದರ ಹೊಂದಿರುವ ಈ ವೀರ ಕಂಬಳ ಕನ್ನಡ, ತುಳು ಭಾಷೆಯ ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಚಿತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷತೆಯಾಗಿದೆ.

ತುಳು ರಂಗಭೂಮಿಯ ಪ್ರಸಿದ್ದ ನಿರ್ದೇಶಕ ವಿಜಯ್ ಕೊಡಿಯಾಲ್ ಬೈಲ್ ಚಿತ್ರಕಥೆ ಮತ್ತು ಸಂಭಾಷಣೆಯ ಮೂಲಕ ಈ ಚಿತ್ರಕ್ಕೆ ಜೊತೆಯಾಗಿದ್ದಾರೆ. ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ನಾಯಕನಾಗಿ ಸವಾಲಿನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪ್ರತಿಯೊಂದು ಸೂಕ್ಷ್ಮ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತುಳುನಾಡಿನ ಪ್ರಾಜ್ಞರ ಮಾರ್ಗದರ್ಶನದಲ್ಲಿ ಯಾವುದೇ ತೊಡಕಿಲ್ಲದಂತೆ ವೀರ ಕಂಬಳವನ್ನು ಅಣಿಗೊಳಿಸಿರುವುದಾಗಿ ರಾಜೇಂದ್ರ ಸಿಂಗ್ ಬಾಬು ಅಭಿಪ್ರಾಯ ಹಂಚಿಕೊಂಡಿದ್ದರು.

ವಿಶೇಷವೆಂದರೆ, ಕಂಬಳದಲ್ಲಿ ಕೋಣಗಳನ್ನು ಓಡಿಸೋದರಲ್ಲಿ ದಾಖಲೆ ಬರೆದಿರುವ ಶ್ರೀನಿವಾಸ್‌ ಗೌಡ ಇಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿದ್ದಾರೆ. ಸ್ವರಾಜ್ ಶೆಟ್ಟಿ ಅವರಿಗೆ ಜೊತೆಯಾಗಿದ್ದಾರೆ. ದುಬೈನಲ್ಲಿಯೂ ಚಿತ್ರೀಕರಣ ನಡೆಸಲಾಗಿದೆ.

ಈ ಚಿತ್ರವನ್ನು ಡಾ. ವಿನಿತಾ ವಿಜಯ್ ಕುಮಾರ್‌ರೆಡ್ಡಿ ಹಾಗೂ ಅರುಣ್ ರೈ ತೊಡಾರ್‌ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್‌ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ದ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ .ಎಸ್‌.ಬಾಬು ಸಂಕಲನ, ಚಂದ್ರಶೇಖರ್‌ಸುವರ್ಣ ಮುಲ್ಕಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ